Tuesday, November 10, 2009

ಶಂಕರ್ ನಾಗ್ ನೆನಪಿಗೊಂದು ವೆಬ್ ಸೈಟು!

ಶಂಕರ್ ನಾಗ್ ಒಬ್ಬ ವ್ಯಕ್ತಿಯಾಗಿ, ಶಕ್ತಿಯಾಗಿ ನಾಡಿನ ಜನಮನದಲ್ಲಿ ಅಜರಾಮರ. ಯಾವುದೇ ಸ್ಟಾರ್ ಗಿರಿಯ ಹಂಬಲವಿಲ್ಲದೇ ತನ್ನದೇ ಆದ ಆಲೋಚನೆಗಳಿಗೆ ರೂಪು ಕೊಡುತ್ತಾ, ಹೊಸ ಚಿಂತನೆಗಳನ್ನು ಹರವಿಕೊಳ್ಳುತ್ತಾ ಸಾರಸ್ವತ ಲೋಕದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿದ ಧೀಮಂತ. ನಾಟಕದ ಹುಚ್ಚು ಹತ್ತಿಸಿಕೊಂಡು ಇದ್ದ ಬ್ಯಾಂಕ್ ಆಫ್ ಇಂಡಿಯಾದ ನೌಕರಿಗೆ ತಿಲಾಂಜಲಿ ಇಟ್ಟು ಕನಸುಗಳನ್ನು ಕಟ್ಟಿದ, ಕನಸನ್ನು ನಿಜ ಮಾಡಿದ, ತಾನೂ ಬೆಳೆದ, ತನ್ನೊಂದಿಗೆ ಹಲವರನ್ನು ಬೆಳೆಸಿದ, ವ್ಯವಸ್ಥೆಯಲ್ಲಿ ಒಂದು ಹೊಸ ಸಂಚಲನವನ್ನು ಹುಟ್ಟುಹಾಕಿದ ಸಾಹಸಿ ಆತ! ಬದುಕಿದ್ದು 3ದಶಕಗಳಾದರೂ ಸಾಧಿಸಿದ್ದು ಮತ್ತು ನಮ್ಮೊಂದಿಗೆ ಬಿಟ್ಟು ಹೋಗಿದ್ದು ಎಂದೆಂದಿಗೂ ಮರೆಯಲಾಗದ ಕನಸುಗಳ ಸಾಕಾರವನ್ನು ಹೊಸ ಸಂಚಲನದ ಸೃಷ್ಟಿಯನ್ನು. ಶಂಕರ್ ಗೆ ಅಂತ ಒಂದು ಅಭಿಮಾನಿ ಸಂಘವಿರಲಿಲ್ಲ ಆದರೆ ಆತ ತನ್ನ ನಾಟಕಗಳ ಮೂಲಕ ಜಗತ್ತಿನ ಹಲವು ದೇಶಗಳನ್ನು ಸುತ್ತಿದ್ದ. ದೇಶಿ ಪರಂಪರೆಯನ್ನು ವಿದೇಶದಲ್ಲೂ ಪಸರಿಸಿದ್ದ, ಒಂದೇ ಒಂದು ಟೆಲಿ ಸೀರಿಯಲ್ ಸ್ವಾಮಿ ಅಂಡ್ ಹಿಸ್ ಪ್ರೆಂಡ್ಸ್ ಆತನಿಗೆ ಜಾಗತಿಕ ಖ್ಯಾತಿಯನ್ನು ತಂದು ಕೊಟ್ಟಿತು. ದೇಶದಲ್ಲಿಯೇ ಮೊದಲನೆಯದು ಎನ್ನುವಂತಹ ಕಂಟ್ರಿಕ್ಲಬ್ ನಿರ್ಮಿಸಿದ ಶಂಕರ್ ಒಂದೊಳ್ಳೆಯ ಪತ್ರಿಕೆಯನ್ನು, ನಮ್ಮದೇ ಆದ ಕನ್ನಡದ ಛಾನಲ್ ಅನ್ನು, ಬಡವರಿಗೆ ಕಡಿಮೆ ಬೆಲೆಯ ಮನೆಯನ್ನು, ನಂದಿ ಬೆಟ್ಟಕ್ಕೆ ರೋಪ್ ವೇ ಯನ್ನು, ಮೆಟ್ರೋ ರೈಲು ಯೋಜನೆಗೆ ಹೀಗೆ ಬಿಡುವಿಲ್ಲದ ಕನಸುಗಳನ್ನು ಕಟ್ಟಿಕೊಂಡಿದ್ದ . ಆದರೆ ಸಾಧಿಸುವುದು ಇನ್ನು ಇದೆಯೆನ್ನುವಾಗಲೇ ವಿಧಿ ಅವರನ್ನು ಸೆಳೆದು ಕೊಂಡು ಬಿಟ್ಟಿತು. ಇಂತಹ ಶಂಕರ್ ನಾಗ್ ನೆನಪಿಗಾಗಿ ಅವರ ಜನ್ಮ ದಿನವಾದ ನವೆಂಬರ್ 9ರಂದು ಹಿರಿಯ ಪತ್ರಕರ್ತ ರಾದ ಎಂ ಕೆ ಭಾಸ್ಕರ ರಾವ್ "ಶಂಕರ್ ನಾಗ್" ವೆಬ್ ಸೈಟನ್ನು ಸೃಜಿಸಿದ್ದಾರೆ. ನವೆಂಬರ್ 9ರಂದು ಅದು ಚಾಲನೆಗೊಂಡಿದೆ. ಖ್ಯಾತ ನಾಟಕಕಾರ ಗಿರಿಶ್ ಕಾರ್ನಾಡ್ ಅದನ್ನು ಉದ್ಘಾಟಿಸಿದ್ದಾರೆ. ಅಲ್ಲಿ ಶಂಕರ್ ನೆನಪಿನ ಅಪರೂಪದ ವಿವರಣೆಯಿದೆ, ಚಿತ್ರ ಸಂಪುಟವಿದೆ, ಕೆಲವು ಆಯ್ದ ಚಿತ್ರಗಳ ಲಿಂಕ್ ನೀಡಲಾಗಿದೆ. ನೀವೂ ಒಮ್ಮೆ ಭೇಟಿ ನೀಡಿ. ವಿಳಾಸ ಹೀಗಿದೆ. ಶಂಕರ್ ನಾಗ್ . ಇನ್. ಹಾಗೆ ಮತ್ತೊಂದು ವಿಚಾರ ಪ್ರಸಿದ್ದ ಅಂತರ್ ಜಾಲ ತಾಣ ಫೇಸ್ ಬುಕ್ ನಲ್ಲೂ ಶಂಕರ್ ನಾಗ್ ಫ್ಯಾನ್ ಕ್ಲಬ್ ಇದೆ, ಅಲ್ಲಿ ವಿಶೇಷವಾಗಿ ಶಂಕರ್ ಬಗ್ಗೆ ಚರ್ಚೆ ಸಂವಾದ ಇರುತ್ತೆ ಅಲ್ಲಿಗೂ ಹೋಗಿ ಬನ್ನಿ.

ಮಾಧ್ಯಮದ ಅಂಗಡಿಗಳು ಮತ್ತು ಪತ್ರಕರ್ತರು!

ಕಾಸ್ಟ್ ಕಟಿಂಗ್ ಮತ್ತು ನಿಶ್ಚಿತ ಆದಾಯದ ಕೊರತೆಯಿಂದ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಪರ್ಫಾರ್ಮೆನ್ಸ್ ವೀಕ್ ಎಂಬ ಕಾರಣ ನೀಡಿ ತೆಗೆಯುವ ಪ್ರಕ್ರಿಯೆ ಈಗ ನಡೆಯುತ್ತ...