Sunday, November 27, 2011

ಭ್ರಷ್ಟಾಚಾರದ ವಿರುದ್ದ, ನಿಮ್ಮೊಂದಿಗೆ ನಾವಿದ್ದೇವೆ!

ದೇಶದ ಒಬ್ಬ ಸಾಮಾನ್ಯ ನಾಗರೀಕ ವ್ಯವಸ್ಥೆಯ ವಿರುದ್ದ ತಿರುಗಿ ಬೀಳುತ್ತಿದ್ದಾನೆ ಪರಿಣಾಮ ಕೇಂದ್ರದ ಮಂತ್ರಿಯಾಗಿರುವ ಶರದ್ ಪವಾರ್ ನಂತಹವರಿಗೆ ಕಪಾಳ ಮೋಕ್ಷವಾಗಿದೆ. ಒಂದು ಕ್ಷಣ ಅವಾಕ್ಕಾಗಿ ನಂತರ ಏನೂ ನಡೆದೆ ಇಲ್ಲವೇನೋ ಎಂಬಂತೆ ಆತನೇನೋ ನಡೆದು ಹೋಗಿದ್ದಾನೆ, ಆದರೆ ವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಆತನ ಕಪಾಳಕ್ಕೆ ಬಾರಿಸಿದ ಹರ್ವಿಂದರ್ ಸಿಂಗ್ ದೇಶದ ಜನರ ಸಧ್ಯದ ಮನಸ್ಥಿತಿಯ ಪ್ರತೀಕವಾಗಿ ಗೋಚರಿಸಲಾರಂಭಿಸಿದ್ದಾನೆ. ಪ್ರಕರಣ ಕುರಿತು ಅಣ್ಣಾ ಹಜಾರೆಯನ್ನು ಪ್ರಶ್ನಿಸಿದರೆ "ಹೌದಾ ! ಒಂದೇ ಕೆನ್ನೆಗೆ ಏಟು ಬಿತ್ತಾ ಎಂದು ಪ್ರಶ್ನಿಸಿದ್ದಾರೆ" ಅಂದರೆ ನಾವೆಲ್ಲಿಗೆ ತಲುಪಿದ್ದೇವೆ ಅಥವಾ ಎಂಥ ಪರಿಸ್ಥಿತಿ ನಮ್ಮೆದುರಿಗಿದೆ ಎಂಬುದರ ದರ್ಶನ ಮಾಡಿಸುತ್ತದೆ.  ಘಟನೆಯನ್ನು ಟೀವಿಯಲ್ಲಿ ನೋಡಿದ ಜನ ಅದನ್ನು ಒಂದು ಪ್ರಹಸನದಂತೆ ವೀಕ್ಷಿಸಿದ್ದರೆ , ದೇಶದ ರಾಷ್ಟ್ರೀಯ ಖಾಸಗಿ ವಾಹಿನಿಗಳು ಗಂಭೀರವಾಗಿ ಚರ್ಚೆಗೂ ತಂದಿವೆ. ಕೆಲವೇ ಮಂದಿ ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸಿದ್ದಾರೆ, ರಾಜಕೀಯ ಪಕ್ಷಗಳು ತಮಗೆ ಸಂಬಂಧಿಸಿಲ್ಲವೆಂದು ಮುಗುಮ್ಮಾಗಿವೆ. ಇದು ತಳ್ಳಿಹಾಕುವ ವಿಚಾರವಲ್ಲ ಗಂಭೀರವಾಗಿ ಆಲೋಚಿಸಬೇಕಾದ ಸಂಗತಿ ಎಂಬುದನ್ನು ಅರಿಯಬೇಕು.

ಈ ದೇಶದ ಸಾಮಾನ್ಯ ಜನತೆ ಗಮನಿಸಬೇಕು, ಜಾಗತೀಕರಣದ ಬಿಸಿ ದೇಶದ ಎಲ್ಲ ವ್ಯಾವಹಾರಿಕ ವಲಯಗಳನ್ನು ಆಪೋಶನ ತೆಗೆದುಕೊಳ್ಳಲಾರಂಭಿಸುತ್ತಿದ್ದಂತೆ ಚಿಲ್ಲರೆ ವಹಿವಾಟು ವಲಯದಲ್ಲೂ ಜಾಗತಿಕ ವ್ಯವಹಾರದ ಅವಕಾಶಗಳನ್ನು ನೀಡಲಾಗುತ್ತಿದೆ. ಅಭಿವೃದ್ದಿಯ ನೆಪದಲ್ಲಿ ದೇಶದ ಬೆನ್ನೆಲುಬಾದ ರೈತರ ಕೃಷಿ ಭೂಮಿಯನ್ನು ಕಿತ್ತು ಉದ್ದಿಮೆ ದಾರರಿಗೆ ಹೂಡಿಕೆದಾರರಿಗೆ ಡಿ ನೋಟೀಫೈ ಮಾಡುತ್ತಿರುವುದಾರಿಂದ ದೇಶದ ಆರ್ಥಿಕ ಪರಿಸ್ಥಿತಿ ಅಯೋಮಯವಾಗುತ್ತಿದೆ.ಆಹಾರ ಪದಾರ್ಥಗಳ ಉತ್ಪಾದನೆ ಕುಂಠಿತವಾಗಿದೆ, ದುಡಿಯುವ ಕೈಗಳಿಗೆ ಉದ್ಯೋಗವಿಲ್ಲದಂತಾಗಿದೆ, ಶಿಕ್ಷಣ,ಆರೋಗ್ಯಸೇವೆಗಳು ಮಾರಾಟದ ಸರಕಾಗಿವೆ,  ರೂಪಾಯಿಯ ಬೆಲೆ ಡಾಲರ್ ಎದುರು ಕುಸಿದಿದೆ. ದಿನಬಳಕೆ ಪದಾರ್ಥಗಳ ಬೆಲೆ ಏರಿಕೆ ಯದ್ವಾ ತದ್ವಾ ಏರಿದೆ, ಪೆಟ್ರೋಲು, ಡಿಸೆಲ್, ಅಡುಗೆ ಅನಿಲದ ಬೆಲೆ ತಿಂಗಳಿಗೆ, 15ದಿನಕ್ಕೆ ದಿಕ್ಕು ದೆಸೆಯಿಲ್ಲದಂತೆ ಏರುತ್ತಿದೆ.ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಅವಕಾಶಗಳು ಬಿಸಿಲ್ಗುದುರೆಯಾಗಿದೆ.ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನತೆ ಬದುಕು ಸಾಗಿಸುವುದು ಹೇಗೆ?
         ಜನಸಾಮಾನ್ಯರ ಸಂಕಷ್ಠಗಳನ್ನು ಸರ್ಕಾರಗಳು ಕೇಳುತ್ತಿಲ್ಲ, ವಿರೋಧ ಪಕ್ಷಗಳು ಆಲಿಸುತ್ತಿಲ್ಲ, ಧ್ವನಿಯೆತ್ತುತ್ತಿಲ್ಲ, ಹೀಗಿರುವಾಗ ಜನಸಾಮಾನ್ಯ ತಾನೆ ಏನು ಮಾಡಿಯಾನು? ಹರ್ವಿಂದರ್ ಸಿಂಗ್ ಇಂತಹ ಸಮಸ್ಯೆಗಳ ಪ್ರತಿನಿಧಿಯಾಗಿ ಒಬ್ಬ ಟ್ರಕ್ ಚಾಲಕನಾಗಿ ತನ್ನ ಅಸಹನೆಯನ್ನು ಹೊರಹಾಕಿದ್ದಾನೆ. ಆತ ಹೊರ ಹಾಕಿದ ಆಕ್ರೋಶ ನಾಗರೀಕತೆಯ ಲಕ್ಷಣವಾಗಿಲ್ಲದಿರ ಬಹುದು ಆದರೆ  ಅದು ಅನಿವಾರ್ಯದ ಸಂಕೇತವೂ ಹೌದಲ್ಲವೇ? ಉಸಿರುಗಟ್ಟಿದ ವಾತಾವರಣದಲ್ಲಿ ಸಾಮಾನ್ಯ ನಾಗರಿಕ ಇನ್ನೇನು ತಾನೆ ಮಾಡಲು ಸಾಧ್ಯ?
           ಇಂತಹ ದುಸ್ಥಿತಿಗೆ ಭ್ರಷ್ಟಾಚಾರವೂ ಮೂಲ ಕಾರಣವೆಂಬುದರಲ್ಲಿ  ಎರಡು ಮಾತಿಲ್ಲ, ಸಧ್ಯ ಅಣ್ಣಾ ಹಜಾರೆ ಗೆ ಮಾತು ಕೊಟ್ಟಂತೆ ಕೇಂದ್ರ ಸರ್ಕಾರ ಪರಿಷ್ಕೃತ ಜನಲೋಕಪಾಲ ಮಸೂದೆಯನ್ನು ಈಗ ನಡೆಯುತ್ತಿರುವ  ಸಂಸತ್   ನಲ್ಲಿ ಮಂಡಿಸಲಿದೆ, ಈ ಸನ್ನಿವೇಶದಲ್ಲಿ ಭ್ರಷ್ಟಾಚಾರ ದವಿರುದ್ದ ರಾಜ್ಯದಲ್ಲಿ ಜನರನ್ನು ಸಂಘಟಿಸಿ ನೇತೃತ್ವ ವಹಿಸಿದ್ದ ಮಾಜ  ಿಲೋಕಾಯುಕ್ತಸಂತೋಷ್    ಹೆಗಡೆಯವರ ವಿರುದ್ದ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗ ಳು ಮನೋಸಾಮರ್ತ್ಯ  ಕುಂದಿಸುವರೀತಿಯಲ್ಲಿ ನಡೆದುಕೊಳ್ಳುತ್ತಿವೆ. ವಿನಾಕಾರಣದ ಆಪಾದನೆಗಳನ್ನು ಮಾಜಿ ಸಿ ಎಂ ಯಡಿಯೂರಪ್ಪ ಮಾಡುತ್ತಿದ್ದಾರೆ. ಗಣಿ ದುಡ್ಡು ತಿಂದ ಕೆಲ ಪತ್ರಕರ್ತರು ಸಂತೋಷ್ ಹೆಗಡೆಯವರನ್ನು ವಿನಾಕಾರಣ ಹಳಿಯುವ ವರದಿಗಳನ್ನು ಪ್ರಕಟಿಸುತ್ತಾ ಸಾರ್ವಿಜನಿಕವಾಗಿ ಅಸಹ್ಯ ಸೃಷ್ಟಿಸುತ್ತಿದೆ, ಇಂತಹ ಸನ್ನಿವೇಶದಲ್ಲಿ ಸಂತೋಷ್ ಹೆಗಡೆಗೆ ನೈತಿಕ ಸ್ತ್ಐರ್ಯ ತುಂಬುವ ಕೆಲಸ ಆಗಬೇಕಾಗಿದೆ. ಭ್ರಷ್ಟಾಚಾರದ ವಿರುದ್ದದ ಹೋರಾಟ ಕ್ಕೆ ಬೆಂಬಲಿಸುವ ನಿಟ್ಟಿನಲ್ಲಿ ಹಾಸನ ಪ್ರಗತಿ ಪರ ಚಿಂತಕರು "ಸಂತೋಷ್ ಹೆಗಡೆ ಭಾವಚಿತ್ರಗಳನ್ನು ಸಾರ್ವಜನಿಕ ಸ್ಥಳದಲ್ಲಿ ಹಾಕಿ  ವಿಚಾರಬೆಂಬಲ ಪಡೆಯುವ ಆಂಧೋಲನ ಆರಂಭಿಸಿದ್ದಾರೆ. ಅದೇ ರೀತಿ ನೀವು ನಿಮ್ಮೂರಿನಲ್ಲಿ ಭ್ರಷ್ಟಾಚಾರದ ವಿರುದ್ದ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಘೋಷಣಾ ಫಲಕದ ಸಂತೋಷ್ ಹೆಗಡೆ ಚಿತ್ರವನ್ನು ಹಾಕ ಬಹುದಲ್ಲವೇ?

Sunday, November 6, 2011

ಕನ್ನಡದ ಹಿರಿಮೆ ಗೊತ್ತೇ?ನ್ರಿ

ಕನ್ನ ಡ ಪ್ರೀತಿ ಎಂದರೇನು? ಕನ್ನಡ ಹಾಡು ಕೇಳೋದು, ಸಿನಿಮಾ ನೋಡೋದು, ಪುಸ್ತಕ ಓದೋದು, ಕನ್ನಡ ಮಾತನಾಡೋದು, ಕನ್ನಡದಲ್ಲಿ ಬರೆಯುವುದು ಎಲ್ಲಾ ಸರಿ ಆದರೆ ಕನ್ನಡದಲ್ಲಿ ಕಲಿಯುವುದು ಎಂಬ ಮಾತಿಗೆ ಮಾತ್ರ ಹೆಚ್ಚಿನ ಪುಷ್ಠಿ ಸಿಗುತ್ತಿಲ್ಲ. ಕನ್ನಡ ಭಾಷೆ ಅಳಿವು ಉಳಿವು ಕುರಿತು ಬೆರಳೇಣಿಕೆಯ ಮಂದಿ ಮಾತ್ರ ಪ್ರತಿಭಟನೆಗೆ ಮುಂದಾಗುವುದು, ಆಸಕ್ತಿ ವಹಿಸುವುದು ಕೆಲವರಿಗೆ ಮಾತ್ರ ಸೀಮಿತವಾದಂತಿದೆ. ಕನ್ನಡಿಗರಲ್ಲಿ ನೈಜವಾದ ಸ್ವಾಭಿಮಾನ ಭಾಷೆ-ಸಂಸ್ಕೃತಿಯ ಬಗೆಗೆ ಪ್ರೀತಿ ಇದ್ದಿದ್ದರೆ ಇವತ್ತಿನವರೆಗೂ ಭಾಷೆಯ ಉಳಿವಿಗೆ ಹೋರಾಡಬೇಕಾದಂತಹ ಪರಿಸ್ಥಿತಿ ಉದ್ಭವವಾಗುತ್ತಿರಲಿಲ್ಲ. ನಮ್ಮ ಭಾಷೆಗೆ ಶಾಸ್ತ್ರೀಯ ಸ್ಥಾನಮಾನ 2011ರ ಜುಲೈ ತಿಂಗಳಲ್ಲಿಯೇ ಲಬಿಸಿದ್ದರೂ ಕೊಂಗರ ಕಿತಾಪತಿಯಿಂದ ಪೂರಕ ಚಟುವಟಿಕೆಗ ಳಿಗೆ ಹಿನ್ನೆಡೆ ಉಂಟಾಗಿದೆ.  ಈ ಸಂಧರ್ಭದಲ್ಲಾದರೂ ಈ ಕುರಿತು ಅವಲೋಕನವಾಗ ಬೇಕಾಗಿದೆ.
            ನಮ್ಮ ಅನ್ನದ ಭಾಷೆ ಕಸ್ತೂರಿ ಕನ್ನಡದ ಬಗೆಗೆ ಒಂದಿಷ್ಟು ಅರಿಯೋಣ.ಕನ್ನಡ ಭಾಷೆ ಭಾರತದ ದ್ರಾವಿಡ ಭಾಷೆಗಳಲ್ಲಿ ಪ್ರಮುಖವಾದ ಭಾಷೆ, ಸುಮಾರು 50ಮಿಲಿಯನ್ ಜನ ಜಾಗತಿಕವಾಗಿ ಕನ್ನಡ ಭಾಷೆ ಮಾತನಾಡುತ್ತಾರೆ, ಜಾಗತಿಕ ಮಟ್ಟದಲ್ಲಿ ಅತ್ಯಂತ ಹೆಚ್ಚು ಬಳಸಲ್ಪಡುವ ಭಾಷೆಯಾಗಿ ಕನ್ನಡಕ್ಕೆ 27ನೇ ಸ್ಥಾನವಿದೆ. ಕನ್ನಡ ತನ್ನ ಒಡಲಲ್ಲಿ ತುಳು, ಕೊಡವ, ಬ್ಯಾರಿ ಮತ್ತು ಕೊಂಕಣಿ ಭಾಷೆಗಳಿಗೆ ಮಾತೃ ಸ್ಥಾನದಲ್ಲಿದೆ. 1600ವರ್ಷಗಳಷ್ಟು ಹಳೆಯದಾದ ಇತಿಹಾಸ ಹೊಂದಿರುವ ಕನ್ನಡ ಬಾಷೆಯ ಬರವಣಿಗೆ ಪ್ರಾಕಾರ ಆರಂಭವಾಗಿದ್ದು 5ಮತ್ತು 6ನೇ ಶತಮಾನದಲ್ಲಿ. ಕನ್ನಡದ ಪ್ರಥಮ ಶಾಸನ ಹಲ್ಮಿಡಿ ಶಾಸನ ಸಿಕ್ಕ ಮೇಲೆ ಸುಮಾರು 30000ಸಾವಿರಕ್ಕೂ ಹೆಚ್ಚು ಕನ್ನಡದ ಶಾಸನಗಳು ಸಿಕ್ಕಿದ್ದು ಕನ್ನಡದ ಅಸ್ತಿತ್ವ ಎಷ್ಟು ಹಳೆಯದು ಎಂಬುದನ್ನು ಸಾರಿ ಸಾರಿ ಹೇಳುತ್ತವೆ. ಕನ್ನಡ ಸಾಹಿತ್ಯಕ್ಕೆ ಹೆಚ್ಚಿನ ಪ್ರೋತ್ಸಾಹ ದೊರಕಿದ್ದು 9ಮತ್ತು 10ನೇ ಶತಮಾನದಲ್ಲಿದ್ದ ರಾಷ್ಟ್ರಕೂಟರ ಆಡಳಿತದಲ್ಲಿ. ಕನ್ನಡದಲ್ಲಿ ಬಂದಷ್ಟು ಸಾಹಿತ್ಯ ಪ್ರಾಕಾರಗಳು ಜಗತ್ತಿನ ಯಾವ ಭಾಷೆಯಲ್ಲೂ ಬಂದಿರಲಾರದು. ಕನ್ನಡದಲ್ಲಿ ದ್ವಿಪದಿಗಳು, ತ್ರಿಪದಿಗಳು,ವಚನ ಸಾಹಿತ್ಯ, ರಗಳೆ, ವ್ಯಾಕರಣ, ಜೈನಸಾಹಿತ್ಯ,ಭಕ್ತಿ ಸಾಹಿತ್ಯ, ದಾಸ ಸಾಹಿತ್ಯ, 15ನೇ ಶತಮಾನ ದಲ್ಲಿ ಬಂದ ಕರ್ನಾಟಕ ಸಂಗೀತ ಪರಂಪರೆ ಹೊಸ ಮೈಲುಗಲ್ಲನ್ನೇ ಸೃಷ್ಟಿಸಿದೆ. 20ನೇ ಶತಮಾನದ ಆಧುನಿಕ ಕನ್ನಡ ಪರಂಪರೆಯಲ್ಲಿ ನವೋದಯ ಸಾಹಿತ್ಯ,ನವ್ಯೋತ್ತರ ಸಾಹಿತ್ಯ, ದಲಿತ ಬಂಡಾಯ ಸಾಹಿತ್ಯ ಕರ್ನಾಟಕದ ಸಾಂಸ್ಕೃತಿಕ ಪರಂಪರೆ ಮತ್ತು ಸಾಮಾಜಿಕ ಪರಂಪರೆಯನ್ನು ಶ್ರೀಮಂತ ಗೊಳಿಸಿರುವುದಷ್ಟೇ ಅಲ್ಲ ಸೂಕ್ಷ್ಮ ಸಂವೇದನೆಯ ಮೂಲಕ ಜಾಗತಿಕ ಭೂಪಟದಲ್ಲಿ "ಕನ್ನಡ" ಹೊಸ ಸಂಚಲನವನ್ನೇ ಉಂಟುಮಾಡಿದೆ. ಕನ್ನಡದ ಸಾಹಿತಿಗಳಿಗೆ ಇತರೆಲ್ಲ ಭಾಷೆಯ ಸಾಹಿತಿಗಳಿಗಿಂತ ಅತೀ ಹೆಚ್ಚಿನ ಎಂದರೆ 8 ಜ್ಞಾನಪೀಠಿಗಳನ್ನು ಪಡೆದಿದೆ. 52ಕ್ಕೂ ಹೆಚ್ಚು ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರಗಳನ್ನ ಪಡೆದಿದೆ.
              ಕರ್ನಾಟಕ ರಾಜ್ಯದಲ್ಲಿಯೇ ಕನ್ನಡ ಭಾಷೆಯನ್ನು ೨೦ ಶೈಲಿಗಳಲ್ಲಿ ಮಾತನಾಡುವುದನ್ನು ಕಾಣಬಹುದು. ಅವುಗಳಲ್ಲಿ ವಿಶಿಷ್ಠವಾದುದು ಕುಂದಾಪುರದ ಕುಂದಕನ್ನಡ, ನಾಡವ ಕನ್ನಡ, ಹವ್ಯಕರ ಹವಿಗನ್ನಡ, ಅರೆಭಾಷೆ, ಸೋಲಿಗ ಭಾಷೆ, ಬಡಗ, ಗುಲ್ಬರ್ಗ ಕನ್ನಡ, ದಾರವಾಡ ಕನ್ನಡ, ರಾಯಚೂರು ಕನ್ನಡ, ಮೈಸೂರು ಕನ್ನಡ, ಮಂಡ್ಯ ಕನ್ನಡ, ಮಂಗಳೂರು ಕನ್ನಡ, ಚಿತ್ರದುರ್ಗ ಕನ್ನಡ, ಕೊಳ್ಳೆಗಾಲದ ಭಾಷೆ ಹೀಗೆ ವೈವಿಧ್ಯವಿದೆ. ಯಕ್ಷಗಾನ, ಭರತನಾಟ್ಯ, ಕರ್ನಾಟಕ ಸಂಗೀತ ಜಗತ್ತಿಗೆ ಕರ್ನಾಟಕದ ಹೆಮ್ಮೆಯ ಕೊಡುಗೆ. ಬೇಲೂರು-ಹಳೆಬೀಡು,ಹಂಪೆ, ಶ್ರವಣಬೆಳಗೊಳ,ಪಟ್ಟದಕಲ್ಲು-ಐಹೊಳೆ,ಗೋಲಗುಮ್ಮಟ ದಂತಹ ಅಂತರ ರಾಷ್ಟ್ರೀಯ ಸ್ಮಾರಕಗಳು, ಶ್ರೇಷ್ಠ ಕವಿಗಳು,ಅರಸ ಪರಂಪರೆ, ಮುತ್ಸದ್ದಿ ರಾಜಕಾರಣಿಗಳು, ಕ್ರೀಡಾಪಟುಗಳು, ನಟರು,ನಿರ್ದೇಶಕರು, ಕಲಾವಿದರು ನಮ್ಮಲ್ಲಿದ್ದಾರೆ.


           ಇಂತಹದ್ದೊಂದು ಶ್ರೀಮಂತ ಪರಂಪರೆ ಇದ್ದಾಗ್ಯೂ ನಮಗೇಕೇ ಇಂತಹ ದುರ್ಗತಿ? ಕರ್ನಾಟಕ ರಾಜ್ಯ ಪ್ರಾಕೃತಿದತ್ತವಾಗಿ ಸಾಂಸ್ಕೃತಿಕವಾಗಿ ಸಂಪದ್ಭರಿತವಾಗಿದೆ ಹಾಗಾಗಿ ಬಹಳ ಹಿಂದಿನಿಂದಲೂ ಅಕ್ಕಪಕ್ಕದ ರಾಜ್ಯದವರು ಉತ್ತರ ಭಾರತದ ಮಂದಿ ಅಂದರೆ ಆಂಧ್ರ ವಾಳ್ಳುಗಳು,ತಮಿಳು ಕೊಂಗರು,ರಾಜಾಸ್ಥಾನದ ಸೇಟುಗಳು, ಮರಾಠಿಗಳು, ಬಿಹಾರಿಗಳು, ಬಂಗಾಲಿಗಳು, ಮಲೆಯಾಳಿಗಳು, ಉತ್ತರಪ್ರದೇಶದವರು ಹೀಗೆ ಸಮಸ್ತರು ಇಲ್ಲಿ ಬಂದು ನೆಲೆಗೊಂಡರು. ಈ ನಡುವೆ ಜಾಗತೀಕರಣದ ಭೂತದಿಂದಾಗಿ ರಾಜ್ಯದಲ್ಲಿ ಹಲವು ಉದ್ದಿಮೆಗಳು ಸ್ಥಾಪಿಸಲ್ಪಟ್ಟವು. ಬೆನ್ನಲ್ಲೇ ದೇಶ ವಿದೇಶಿಗರ ವಲಸೆಯು ಹೆಚ್ಚಿತು ಪರಿಣಾಮ ನಮ್ಮ ಆಲೋಚನೆಗಳು ಬದುಕಿನ ರೀತಿ ರಿವಾಜುಗಳು ಬದಲಾದವು. ನಮ್ಮ ಸಂಸ್ಕೃತಿಯಲ್ಲಿ ಬದಲಾವಣೆ ಆಯಿತು, ಬಾಷೆಯಿಂದ ವಿಮುಖತೆ ಆಯಿತು ಇದು ಎಷ್ಟರ ಮಟ್ಟಿಗೆ ಇತ್ತೆಂದರೆ ಮಗು ಹುಟ್ಟುತ್ತಲೇ ಅದು ಕನ್ನಡ ಕಲಿತರೆ ತಮಗೆ ಅಪಮಾನ ಎಂದು ತಂದೆತಾಯಿಯರು ಭಾವಿಸುವಂತಾಯಿತು. ಕನ್ನಡೇತರರ ಬಗೆಗಿನ ಅಭಿಮಾನ ಜಾಸ್ತಿಯಾಯಿತು, ಕನ್ನಡ ಶಾಲೆಗಳಿಗಿಂತ ಆಂಗ್ಲಭಾಷೆ ಮಾಧ್ಯಮ ಶಾಲೆಗಳಿಗೆ ಆದ್ಯತೆ ಹೆಚ್ಚಿತು. ರಾಜಕಾರಣಿಗಳು ಮತಬ್ಯಾಂಕಿಗೆ ಇತರೆ ಭಾಷಿಕರನ್ನು ಓಲೈಸಲು ನಿಂತರು. ನಮ್ಮ ನೆಲೆಯಲ್ಲಿ ನಾವೇ ಕನ್ನಡಕ್ಕೆ ಹೋರಾಡುವ ಪರಿಸ್ಥಿತಿಗೆ ಇದೇ ವೇದಿಕೆಯಾಯಿತು. ಕನ್ನಡ ಚಳುವಳಿಯನ್ನು ಇತ್ತೀಚಿನ ದಿನಗಳಲ್ಲಿ ಯಶಸ್ವಿಯಾಗಿ ಪ್ರವರ್ದಮಾನಕ್ಕೆ ತಂದ ನಾರಾಯಣಗೌಡರು ಕನ್ನಡದ ರಕ್ಷಣೆಗೆ ರಕ್ಷಣಾ ವೇದಿಕೆ ಹುಟ್ಟುಹಾಕಿದರೆ, ಇತರರನೇಕರು ಹೊಟ್ಟೆ ಪಾಡಿಗೆ ಅದೇ ಮಾದರಿಯ ಸಂಘಟನೆಗಳನ್ನು ಹುಟ್ಟುಹಾಕಿದರು. ಕನ್ನಡ ರಕ್ಷಣೆಗೆ ಬದಲಾಗಿ ಸುಲಿಗೆಗೆ ನಿಂತು ಆ ಮೂಲಕ ಕನ್ನಡ ಚಳುವಳಿಯನ್ನು ದಿಕ್ಕು ತಪ್ಪಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಲಾಗುತ್ತಿದೆ. ರಾಷ್ಟ್ರದಲ್ಲಿ ಶಾಸ್ತ್ರೀಯ ಭಾಷೆಯ ಸ್ತಾನಮಾನವನ್ನು ೩ ಭಾಷೆಗಳಿಗೆ ಮಾತ್ರ ನೀಡಲಾಗಿದೆ. ಈಗ ತಮಿಳುಭಾಷೆಗೆ ಮಾತ್ರ ಶಾಸ್ತ್ರೀಯ ಸ್ಥಾನಮಾನ ಸಿಗುತ್ತಿದೆ. ಕನ್ನಡಕ್ಕೆ 2ವರ್ಷಗಳ ಹಿಂದೆಯೇ ಶಾಸ್ತ್ರೀಯ ಸ್ಥಾನಮಾನವಿದ್ದರೂ ತಮಿಳುನಾಡಿನ ಕೊಂಗರ ಕುಚೇಷ್ಟೇಯಿಂದ ಅದು ನಮಗಿನ್ನು ಬಿಸಿಲ್ಗುದುರೆಯಾಗಿಸಿತ್ತು.
                ರಾಜ್ಯದಲ್ಲಿ ಕಳೆದ 10ವರ್ಷಗಳಿಂದೀಚೆಗೆ 10500ಕ್ಕೂ ಹೆಚ್ಚು ಶಾಲೆಗಳನ್ನು ಮಕ್ಕಳ ಪ್ರವೇಶಾತಿ ಸಂಖ್ಯ ಗಣನೀಯವಾಗಿ ಇಳಿಕೆಯಾಗುತ್ತಿರುವುದರ ಹಿನ್ನೆಲೆಯಲ್ಲಿ ಮುಚ್ಚಲಾಗಿದೆ, ಪ್ರಸಕ್ತ ವರ್ಷದಲ್ಲಿ 3500ಕ್ಕೂ ಅಧಿಕ ಶಾಲೆಗಳು ಮುಚ್ಚಲು ಸಿದ್ದತೆ ನಡೆದಿದೆ. ರಾಜ್ಯೋತ್ಸವ ಸಂಧರ್ಭದಲ್ಲಿ ಕನ್ನಡ ಸಂಘಟನೆಗಳ ಪ್ರತಿಭಟನೆಗೆ ಅಂಜಿದ ಸರ್ಕಾರ ಶಾಲೆಗಳನ್ನು ಮುಚ್ಚುತ್ತಿಲ್ಲ ಬದಲಾಗಿ ವಿಲೀನ ಗೊಳಿಸಲಾಗುತ್ತಿದೆ ಎಂದು ಹೇಳಿದೆ ಈ ಹಿನ್ನೆಲೆಯಲ್ಲಿ ವಾದ-ಪ್ರತಿವಾದಗಳು ಅವರವರ ತಿಳುವಳಿಕೆಯ ಮಟ್ಟದಲ್ಲಿ ಜಾರಿಯಲ್ಲಿವೆ.ಆದರೆ ಒಂದು ವಿಚಾರ ಗಮನಿಸಬೇಕು  ರಾಜ್ಯದಲ್ಲಿ ಖಾಸಗಿ ಶಾಲೆಗಳನ್ನು ತೆರೆಯಲು ಅನುಮತಿ ಕೊಡುವಾಗ ಸರ್ಕಾರ  ಮನಸ್ಸೊಇಚ್ಚೆಅನುಮತಿ ನೀಡಿ ಕಾನೂನು ಉಲ್ಲಂಘಿಸಿದೆ. ಮೊದಲಿನಂತೆ ಶಿಕ್ಷಣ ಕ್ಷೇತ್ರವನ್ನು ಸೇವಾವಲಯದಲ್ಲಿದೆಯೆಂದು ಭಾವಿಸಬೇಕಿಲ್ಲ, ಬದಲಾಗಿ ಅದೊಂದು ವ್ಯವಹಾರದ ಭಾಗವಾಗಿದೆ ಹಾಗಾಗಿ ಬಂಡವಾಳ ಶಾಹಿಗಳು, ರಾಜಕಾರ ಣಿಗಳು ಶಿಕ್ಷಣದ ಅಂಗಡಿಗಳನ್ನು ತೆರೆದು ಕುಳಿತಿರುವುದು ಪ್ರಮಖ ಅಡ್ಡಿ ಎರಡನೇಯದಾಗಿ ಜಾಗತಿಕ ವ್ಯವಸ್ಥೆ ಯಲ್ಲಿ ಇಂಗ್ಲೀಷ್ ವ್ಯಾಮೋಹಕ್ಕೆ ಬಿದ್ದ ಜನ ಕನ್ನಡ ಶಾಲೆ  ಗಳತ್ತ ಆಸಕ್ತಿ ತೋರದಿರುವುದು ಕನ್ನಡ ಶಾಲೆಗಳು ಮುಚ್ಚಲು ಕಾರಣವಾಗಿವೆ. ಪ್ರತೀ ಸರ್ಕಾರಿ ಉದ್ಯೋಗಿ ತಮ್ಮ ಮಕ್ಖಳನ್ನು  ಕಡ್ಡಾಯವಾಗಿ ಪ್ರಾಥಮಿಕ ಶಿಕ್ಷಣವನ್ನು  ಕನ್ನಡ ಶಾಲೆಗಳಲ್ಲಿ  ಕೊಡಿಸಬೇಕು. ನಿಯಮ ಉಲ್ಲಂಘಿಸಿ ಅನು  ಮತಿನೀಡಿರುವ ಖಾಸಗಿ ಶಾಲೆಗಳನ್ನು ಕಡ್ಡಾಯವಾಗಿ  ಮುಚ್ಚಬೇಕು. ಉದ್ಯೋಗದಲ್ಲಿ ಮತ್ತಿತರ ಸವಲತ್ತುಗಳನ್ನು ನೀಡುವಾಗ ಪ್ರಾಥಮಿಕ ಶಿಕ್ಷಣವನ್ನು ಕಡ್ಡಾಯವಾಗಿ ಕನ್ನಡಶಾಲೆಯಲ್ಲಿ ಮುಗಿಸಿದವರಿಗೆ  ಮಾತ್ರ  ಆದ್ಯತೆಸಿಗುವಂತೆ ಆದೇಶ ಹೊರಡಿಸಬೇಕು ಅಲ್ಲವೇ?(ಸಶೇಷ)

ಮಾಧ್ಯಮದ ಅಂಗಡಿಗಳು ಮತ್ತು ಪತ್ರಕರ್ತರು!

ಕಾಸ್ಟ್ ಕಟಿಂಗ್ ಮತ್ತು ನಿಶ್ಚಿತ ಆದಾಯದ ಕೊರತೆಯಿಂದ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಪರ್ಫಾರ್ಮೆನ್ಸ್ ವೀಕ್ ಎಂಬ ಕಾರಣ ನೀಡಿ ತೆಗೆಯುವ ಪ್ರಕ್ರಿಯೆ ಈಗ ನಡೆಯುತ್ತ...