Sunday, September 11, 2011

ದರ್ಶನ್ ಪ್ರಕರಣ;ನೈತಿಕ ಅಧ:ಪತನದ ಸಂಕೇತ!

ಅಪ್ಪ ಚಿತ್ರರಂಗದಲ್ಲಿ ವಿಲನ್ ಆದ್ರೆ ಮಗ ನಿಜ ಜೀವನದಲ್ಲಿ ವಿಲನ್ ! ಹೌದು ಕಳೆದ 2ದಿನಗಳಿಂದ ದೃಶ್ಯ ಮಾದ್ಯಮಗಳಲ್ಲಿ ಇದೇ ಸುದ್ದಿಯ ವೈಭವೀಕರಣ ನಡೆಯುತ್ತಿದೆ. ಸಾರ್ವಜನಿಕ ಜೀವನದಲ್ಲಿರುವ ನಟನೊಬ್ಬನ ಖಾಸಗಿ ಬದುಕಿನ ತಲ್ಲಣ ಬೀದಿಗೆ ಬಿದ್ದಿದೆ, ಚಿತ್ರರಂಗದ ಗಣ್ಯರಿರಲಿ, ಅಭಿಮಾನಿಗಳ ಸಮೂಹದ ಹೆಸರಿನಲ್ಲಿ ಬೊಬ್ಬೆ ಹಾಕುತ್ತಿರುವ ಕೆಲ ಮಂದಿ ಬೇಷರತ್ ಗೆ ಆಗಿ ದರ್ಶನ್ ಬೆಂಬಲಕ್ಕೆ ನಿಂತು ಬಿಟ್ಟಿದ್ದಾರೆ. ದರ್ಶನ್-ವಿಜಯಲಕ್ಷ್ಮಿಯವರ ಖಾಸಗಿ ಬದುಕಿನ ಒಳನೋಟಗಳೇನೆ ಇದ್ದರು ಅದು ಬೀದಿಗೆ ಬೀಳಬಾರದಿತ್ತು. ಇರಲಿ ಇಂತಹವರನ್ನು ಬೆಂಬಲಿಸುವ ಸಮೂಹ ಸನ್ನಿ ಮಾತ್ರ ಅತ್ಯಂತ ವಿಷಾಧನೀಯ ಸಂಗತಿ. ಸೆಲೆಬ್ರಿಟಿ ಗಳಾದವರನ್ನು ಹಿಂದೂ ಮುಂದೇ ನೋಡದೇ ಅಂದಾನುಕರಣೆ ಮಾಡುವುದು, ತೆರೆಯ ಮೇಲೆ ಇರುವ ಆತನ ಬದುಕನ್ನೇ ಆದರ್ಶವೆಂದು ಭ್ರಮಿಸುವುದು ನಮ್ಮ ಜನರ ಟಿಪಿಕಲ್ ಗುಣ. ಇಂತಹ ಸನ್ನಿವೇಶದಲ್ಲಿ ತಪ್ಪು ಸರಿಗಳ ಆಯ್ಕೆಗಿಂತ ಯಾವುದನ್ನು ಬೆಂಬಲಿಸ ಬೇಕು ಎಂಬುದನ್ನು ಸಹಾ ಜನರ ಅರಿಯುವುದು ಒಳಿತೇನೋ.

        ಒಬ್ಬ ವ್ಯಕ್ತಿ ಯಶಸ್ಸು ಸಾಧಿಸಿದಾಗ ಊರ ಮಂದಿಯೆಲ್ಲ ಆತನ ಹಿಂದೆ ಇರುತ್ತಾರಂತೆ, ಹಾಗೆಯೇ ಸೋತಾಗ ಆತನ ನೆರಳು ಸಹಾ ಆತನನ್ನು ಹಿಂಬಾಲಿಸದು ಎಂಬ ಮಾತಿದೆ. ಆದರೆ ಇದಕ್ಕೆ ತದ್ವಿರುದ್ದವಾಗಿ ಇವತ್ತು ದರ್ಶನ್ ಹಿಂದೆ  ಅಭಿಮಾನದ "ಪೊರ್ಕಿ" ದಂಡು ಇದೆ. ದರ್ಶನ್ ಸಾರ್ವಜನಿಕವಾಗಿ ಒಬ್ಬ ಸಭ್ಯ ನಟ, ಕಷ್ಟಪಟ್ಟು ಮೇಲೆ ಬಂದ ಯಶಸ್ವಿ ನಟ. ಇವತ್ತು ಚಿತ್ರರಂಗದಲ್ಲಿ ಮಿಂಚಲು ಹಿಂದಿನಂತೆ ಸಾಧನೆ-ಶ್ರಮ-ಚೆಲುವು ಈ ಮೂರೂ ಬೇಕಿಲ್ಲ.  ಜೇಬು ತುಂಬಾ ದುಡ್ಡು ಇದ್ದರೆ ಮದ್ಯ ವಯಸ್ಕನೂ ಇಲ್ಲಿ ನಾಯಕನಾಗಲೂ ಯಾವ ತಕರಾರೂ ಇಲ್ಲ ಆದರೆ ಪ್ರೇಕ್ಷಕ ಪ್ರಭು ಮಾತ್ರ ತನಗೆ ಇಷ್ಟ ಬಂದದ್ದನ್ನು ಆಯ್ಕೆ ಮಾಡಿಕೊಂಡು ಸರಿಯಾದ ಪಾಠ ಕಲಿಸುತ್ತಾನೆ.  ಇಂಥಹವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಿದೆ ಈ ನಡುವೆ ಹಳಬರು ತಮ್ಮ  ಛಾರ್ಮನ್ನು ಹಾಗೆಯೇ ಉಳಿಸಿಕೊಂಡು ಬಂದಿದ್ದಾರೆ, ಈ ಪೈಕಿ ಪುನೀತ್ ರಾಜ್ ಕುಮಾರ್, ಸುದೀಪ್, ಶಿವರಾಜ್ ಕುಮಾರ್, ರವಿಚಂದ್ರನ್,ದರ್ಶನ್ ಮತ್ತು  ಪ್ರೇಮ್ ಮತ್ತಿತರರು ಇದ್ದಾರೆ. 
      
          ಚಿತ್ರರಂಗ ಬೆಳೆದಂತೆಲ್ಲ ತಾರೆಯರ ಸಂಭಾವನೆಯೂ ಏರುತ್ತಿದೆ, ಹೀಗೆ ಹಣ ಬಂದಾಗ ಅದನ್ನೆಲ್ಲ ಐಷಾರಾಮಿ ಜೀವನಕ್ಕೆ ವೆಚ್ಚ ಮಾಡಿಕೊಂಡು ತಮ್ಮದೇ ಸಿನಿಮಾ ತಯಾರಿಕಾ ಸಂಸ್ಥೆಯನ್ನು ಹುಟ್ಟುಹಾಕಿ ನಿರ್ದೇಶನಕ್ಕೆ ಇಳಿದು ಬಿಡುವವರೂ ಇದ್ದಾರೆ. ಹೀಗೆ ದುಡ್ಡು ಹೆಚ್ಚಿದಂತೆ ವೈಯುಕ್ತಿಕ ಮಟ್ಟದ ಈಗೋ ಸಹಾ ಬೆಳೆಯುತ್ತಿದೆ, ಪರಿಣಾಮ ನೈತಿಕ ಅಧ:ಪತನದಂತಹ ವಿಷಯಗಳು ಬೆಳಕಿಗೆ ಬರುತ್ತಿವೆ. ನಾಗತ್ತಿಹಳ್ಳಿ ಚಂದ್ರಶೇಖರ್-ಐಂದ್ರಿತಾ ಪ್ರಕರಣ, ದುನಿಯಾವಿಜಿ-ಶುಭಾಪೂಂಜ ಪ್ರಕರಣ, ದಿವಂಗತ  ಮೈಸೂರು ಲೋಕೇಶ್ ಪುತ್ರ ಆದಿಲೋಕೇಶನ sexual harassment ಪ್ರಕರಣ, ಮುಂಗಾರು ಮಳೆಯ ಗಣೇಶನ ವಿವಾದಾತ್ಮಕ ಮದುವೆ! ಹಾಸ್ಯ ನಟ ಶರಣ್ ಹಾಗೂ ಛಾಯಾಗ್ರಾಹಕ ವೇಣು ತಮ್ಮ ಮದುವೆ ಸಂಧರ್ಭ ಕೇಳಿಬಂದ ರಂಕಿನ ಕಥೆಗಳು,ಶೃತಿ-ಮಹೇಂದರ್ ನಡುವಿನ ವಿಭಜನೆ!ಸಿನಿಮಾ ಶೂಟಿಂಗ್ ಗೆ ತೆರಳಿದ್ದ ದಿಗಂತ್ ಅಮೇರಿಕಾದಲ್ಲಿ ಮಾಡಿಕೊಂಡರೆನ್ನಲಾದ ಅಪಸವ್ಯ, ನಿರ್ದೇಶಕ ನಾರಾಯಣ ತನ್ನ ತಂದೆ-ತಾಯಿಯರನ್ನೇ ಹೊರಗಟ್ಟಿದ್ದಾರೆ  ಹೀಗೆ ಹತ್ತು ಹಲವು ಘಟನೆಗಳು ನಮ್ಮ ಕಣ್ಣ ಮುಂದಿವೆ. ತೆರೆಯ ಮೇಲೆ ಪ್ರೇಕ್ಷಕರಿಗೆ ಸಜ್ಜನಿಕೆಯಿಂದ ಕಾಣಿಸಿಕೊಳ್ಳುವ  ಈ ಮಂದಿ ವೈಯುಕ್ತಿಕ ಬದುಕಿನಲ್ಲಿ ಅವರ ಈಗೋ ಅಥವ ತೆವಲಿನಿಂದಾಗಿ ಅಸಹ್ಯ ಎನಿಸುವಂತೆ ನಡೆದುಕೊಂಡು ಬಿಡುತ್ತಾರೆ. ನಮ್ಮ ಜನರೂ ಅಷ್ಟೇ ತೆರೆಯ ಮೇಲಿನದ್ದೇ ಜೀವನ ನಂಬಿ ಕೊಂಡು ಬದುಕುವ ಮತ್ತು ತಮ್ಮ ಜೀವನದಲ್ಲಿ ಪಾಲಿಸುವ ಹುಕಿಗೆ ಬೀಳುವ ಜನ..

         ಇವತ್ತು ಸಿನಿಮಾಗಳು ಅತ್ಯಂತ ಪರಿಣಾಮಕಾರಿಯಾದ ಸಂವಹನ ಮಾದ್ಯಮ. ಅಲ್ಲಿ ಜನ-ಜೀವನ ಮತ್ತು ಅವರ ಮನಸ್ಥಿತಿಯನ್ನಾಧರಿಸಿದ ಕಥೆಗಳು ಮತ್ತು ಪಾತ್ರಗಳನ್ನೆ ಸೃಜಿಸಿ ತೆರೆಯ ಮೇಲೆ ಅನಾವರಣ ಮಾಡಲಾಗುತ್ತಿದೆ. ಅದು ಈಗಷ್ಟೇ ಅಲ್ಲ ಚಿತ್ರರಂಗದ ಆರಂಭದ ದಿನಗಳಿಂದಲೂ ಇಂತಹ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಒಂದು ಚಿತ್ರ ಎಷ್ಟು ನೈಜವಾಗಿರುತ್ತೆ ಎನ್ನುವುದಕ್ಕಿಂತ ಫ್ಯಾಂಟಸಿ ಬೆರೆತ ಚಿತ್ರಗಳನ್ನೇ ಹೆಚ್ಚು ಇಷ್ಟ ಪಡಲಾರಂಭಿಸುತ್ತಾರೆ. ಆ ಪಾತ್ರಗಳ ಮೂಲಕ ತಮ್ಮ ಪ್ರತಿನಿಧಿಯನ್ನು ಗುರುತಿಸಿಕೊಂಡು ಬಿಡುತ್ತಾರೆ. ದುರಂತವೆಂದರೆ ಅಂತಹವರು ಚುನಾವಣೆಗೂ ಅಭಿಮಾನವನ್ನ ಎನ್ ಕ್ಯಾಶ್ ಮಾಡಿಕೊಂಡು ಬಿಡುತ್ತಾರೆ. ದಕ್ಷಿಣ ಭಾರತದಲ್ಲಿ ವಿಶೇಷವಾಗಿ ತಮಿಳುನಾಡು ಮತ್ತು ಆಂದ್ರಪ್ರದೇಶದಲ್ಲಿ ಇಂತಹ ಹುಚ್ಚು ಅಭಿಮಾನ ಳಿದ್ದಾರೆ. ಕರ್ನಾಟಕದ ಮಟ್ಟಿಗೆ ಇಂತಹದ್ದೊಂದು ಅಪಾಯಕಾರಿ ಬೆಳವಣಿಗೆ ಆಗದಿದ್ದರೂ ಒಂದು ಚೌಕಟ್ಟಿನೊಳಗೆ ಎರಡು ಪರ್ವಗಳು ಮುಗಿದಿವೆ. ಒಂದು ಡಾ || ರಾಜ್, ಮತ್ತು ವಿಷ್ಣುವರ್ಧನ್. ಈ ಇಬ್ಬರೂ ಸಮಾಜಕ್ಕೆ ಮಾದರಿಯಾಗುವಂತೆ ಬದುಕಿದವರು, ತೆರೆಯ ಮೇಲಿನ ಬದುಕು ಹಾಗೂ ವೈಯುಕ್ತಿಕ ಬದುಕಿಗೆ ಸಾಮ್ಯ ವಿಟ್ಟುಕೊಂಡು ಆದರ್ಶ ಮೆರೆದವರು. ಇಂತಹ ಮೇರು ಆದರ್ಶಗಳ ನಡುವೆ ಪಡ್ಡೆ ಸಂಸ್ಕೃತಿಯನ್ನು ಹುಟ್ಟು ಹಾಕುವ ಸಿನಿಮಾಗಳ ಮೂಲಕ ಜನಪ್ರಿಯತೆಗೆ ಬಂದ ದರ್ಶನ್, ಗಣೇಶ್ ಸಿನಿಮಾ ಬಿಟ್ಟರೆ ತಮ್ಮ ಪಾಡಿಗೆ ತಾವು ಎಂದು ಬದುಕುತ್ತಿದ್ದಾರೆ. ಆದರೆ ದರ್ಶನ್ ತಮ್ಮ ವೈಯುಕ್ತಿಕ ಬದುಕಿನ ವಿಕೃತಿಯನ್ನು ಸಾರ್ವಜನಿಕವಾಗಿ ತೆರೆದಿಡುವ ಮೂಲಕ ದಿಗಿಲು ಹುಟ್ಟುವಂತೆ ನಡೆದುಕೊಂಡಿದ್ದಾರೆ. ಚಿತ್ರರಂಗದಲ್ಲಿ ಇದು ಮಾಮೂಲು ಎಂದು ಅಂದು ಕೊಳ್ಳಬಹುದಾದರೂ ನಾಯಕ ನಟನೊಬ್ಬನ ವಿಲನ್ ನಡವಳಿಕೆಗಳು ರೇಜಿಗೆ ಹುಟ್ಟಿಸುತ್ತಿವೆ. ಎಲ್ಲಕ್ಕಿಂತ ಹೆಚ್ಚಾಗಿ ಇಂತಹವರನ್ನು ಬೆಂಬಲಿಸುತ್ತಿರುವ ದಂಡು ದರ್ಶನ್ ಪತ್ನಿ ವಿಜಯಲಕ್ಷ್ಮಿಯವರನ್ನ ಸಾರ್ವಜನಿಕವಾಗಿ ತೆಗಳುವ ಮೂಲಕ ಅಪಮಾನಿಸುತ್ತಿರುವುದು ಸರಿಯಲ್ಲ. ಖಾಸಗಿ ಬದುಕು ಇಂದಲ್ಲ ನಾಳೆ ಸರಿಹೋಗಬಹುದು ಎಂಬ ದೂರದ ಆಸೆಯಲ್ಲೇ ವಿಜಯಲಕ್ಷ್ಮಿ ತಮ್ಮ ಹೇಳಿಕೆಗಳನ್ನು ನೋವಿನಲ್ಲೂ ಬದಲಿಸುತ್ತಿದ್ದಾರೆ ಅದು ಅವರ ವಿವೇಚನೆ!. ಆದರೆ ಇಂತಹ ವಿವೇಚನೆ ದರ್ಶನ್ ಅಭಿಮಾನಿಗಳಿಗಿಲ್ಲ, ಮತ್ತು ಆತನನ್ನು ಬೆಂಬಲಿಸುತ್ತಿರುವ ನಟರಿಗೂ ಇಲ್ಲ. 

      ಪ್ರಜ್ನಾವಂತ ವಲಯದಲ್ಲೂ   ಮಹಿಳೆ ಸಾಮಾಜಿಕವಾಗಿ ಇಂದಿಗೂ ಶೋಷಣೆಗೆ ಒಳಗಾಗಿದ್ದಾಳೆ ಮತ್ತು ಅಸಹನೆ ಬದುಕು ಸಾಗಿಸುತ್ತಿದ್ದಾಳೆ ಎಂಬುದಕ್ಕೆ ಈ ಪ್ರಕರಣ ಕೂಡ ಉದಾಹರಣೆ ಆಗಬಹುದು. ದರ್ಶನ್ ಪ್ರೀತಿಸಿ ಮದುವೆಯಾಗಿದ್ದರೂ ಕೂಡಾ ಪ್ರೀತಿಸಿದವಳ ಮೇಲೆಯೇ ಹಲ್ಲೆ ಮಾಡಿ ಚಪ್ಪಲಿಯಲ್ಲಿ ಹೊಡೆದು ಅಪಮಾನಿಸುವುದು ಎಂತಹ ನಾಗರೀಕತೆ? ಏನೂ ಅರಿಯದ ಮುಗ್ದ ಕಂದಮ್ಮನನ್ನು ಸಾಯಿಸಲು ಯತ್ನಿಸಿದರೆಂದು ದೂರಿನಲ್ಲಿ ತಿಳಿಸಲಾಗಿದೆ. ಒಂದು ವೇಳೆ ಸದರಿ ಘಟನೆಯಲ್ಲಿ ಅನಾಹುತ ಸಂಭವಿಸಿದ್ದರೆ ದರ್ಶನ್ ಏನಾಗುತ್ತಿದ್ದ ಹೇಳಿ? ಇಂತಹದ್ದನ್ನೆಲ್ಲ ಅಭಿಮಾನಿ ವರ್ಗ ಯಾಕೆ ಬೆಂಬಲಿಸುತ್ತದೆ? ಅವರ ಖಾಸಗಿ ಬದುಕಿನ ಅನಾಹುತಗಳಿಗೆ ಅಭಿಮಾನಿ ಹೆಸರಿನ ಜವಾಬ್ದಾರಿ ಏಕೆ? ದರ್ಶನ್ ಇನ್ನೂ ಹಲವು ಚಿತ್ರಗಳಿಗೆ ಸಹಿ ಹಾಕಿದ್ದು ಕೆಲವು ಪೂರ್ಣಗೊಂಡಿವೆ ಮತ್ತೆ ಕೆಲವು  ಅರ್ಧ ಚಿತ್ರೀಕರಣವಾಗಿವೆ. ಹೇಗಿರುವಾಗ ಸದರಿ ಚಿತ್ರಗಳ ನಿರ್ಮಾಪಕರುಗಳೇ ದರ್ಶನ್ ಪರವಾದ ಟ್ರೆಂಡ್ ಹುಟ್ಟು ಹಾಕುವ ಮೂಲಕ ಜನರನ್ನು ಮಾದ್ಯಮಗಳ ಮೂಲಕ 'ಮಂಗ' ಮಾಡುತ್ತಿದ್ದಾರೆಯೇ ಎಂಬ ಅನುಮಾನವೂ ಮೂಡದಿರದು. ಒಟ್ಟಾರೆ ನೈತಿಕ ಅಧ:ಪತನದ ಈ ಅಂಶಗಳು ವಿನಾಕಾರಣ ಪ್ರಚಾರ ಪಡೆದುಕೊಳ್ಳ ತೊಡಗಿದೆಂತೆಲ್ಲಾ ಜನ ಅದಕ್ಕೆ ಮುಗಿಬಿದ್ದು ಸ್ಪಂದಿಸುವುದು ಸಾಂಸ್ಕೃತಿಕ ಪ್ರಜ್ಞೆಯ ದುರಂತವಲ್ಲವೇ?

ಮಾಧ್ಯಮದ ಅಂಗಡಿಗಳು ಮತ್ತು ಪತ್ರಕರ್ತರು!

ಕಾಸ್ಟ್ ಕಟಿಂಗ್ ಮತ್ತು ನಿಶ್ಚಿತ ಆದಾಯದ ಕೊರತೆಯಿಂದ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಪರ್ಫಾರ್ಮೆನ್ಸ್ ವೀಕ್ ಎಂಬ ಕಾರಣ ನೀಡಿ ತೆಗೆಯುವ ಪ್ರಕ್ರಿಯೆ ಈಗ ನಡೆಯುತ್ತ...