Sunday, November 27, 2011

ಭ್ರಷ್ಟಾಚಾರದ ವಿರುದ್ದ, ನಿಮ್ಮೊಂದಿಗೆ ನಾವಿದ್ದೇವೆ!

ದೇಶದ ಒಬ್ಬ ಸಾಮಾನ್ಯ ನಾಗರೀಕ ವ್ಯವಸ್ಥೆಯ ವಿರುದ್ದ ತಿರುಗಿ ಬೀಳುತ್ತಿದ್ದಾನೆ ಪರಿಣಾಮ ಕೇಂದ್ರದ ಮಂತ್ರಿಯಾಗಿರುವ ಶರದ್ ಪವಾರ್ ನಂತಹವರಿಗೆ ಕಪಾಳ ಮೋಕ್ಷವಾಗಿದೆ. ಒಂದು ಕ್ಷಣ ಅವಾಕ್ಕಾಗಿ ನಂತರ ಏನೂ ನಡೆದೆ ಇಲ್ಲವೇನೋ ಎಂಬಂತೆ ಆತನೇನೋ ನಡೆದು ಹೋಗಿದ್ದಾನೆ, ಆದರೆ ವ್ಯವಸ್ಥೆಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಆತನ ಕಪಾಳಕ್ಕೆ ಬಾರಿಸಿದ ಹರ್ವಿಂದರ್ ಸಿಂಗ್ ದೇಶದ ಜನರ ಸಧ್ಯದ ಮನಸ್ಥಿತಿಯ ಪ್ರತೀಕವಾಗಿ ಗೋಚರಿಸಲಾರಂಭಿಸಿದ್ದಾನೆ. ಪ್ರಕರಣ ಕುರಿತು ಅಣ್ಣಾ ಹಜಾರೆಯನ್ನು ಪ್ರಶ್ನಿಸಿದರೆ "ಹೌದಾ ! ಒಂದೇ ಕೆನ್ನೆಗೆ ಏಟು ಬಿತ್ತಾ ಎಂದು ಪ್ರಶ್ನಿಸಿದ್ದಾರೆ" ಅಂದರೆ ನಾವೆಲ್ಲಿಗೆ ತಲುಪಿದ್ದೇವೆ ಅಥವಾ ಎಂಥ ಪರಿಸ್ಥಿತಿ ನಮ್ಮೆದುರಿಗಿದೆ ಎಂಬುದರ ದರ್ಶನ ಮಾಡಿಸುತ್ತದೆ.  ಘಟನೆಯನ್ನು ಟೀವಿಯಲ್ಲಿ ನೋಡಿದ ಜನ ಅದನ್ನು ಒಂದು ಪ್ರಹಸನದಂತೆ ವೀಕ್ಷಿಸಿದ್ದರೆ , ದೇಶದ ರಾಷ್ಟ್ರೀಯ ಖಾಸಗಿ ವಾಹಿನಿಗಳು ಗಂಭೀರವಾಗಿ ಚರ್ಚೆಗೂ ತಂದಿವೆ. ಕೆಲವೇ ಮಂದಿ ಪ್ರಜ್ಞಾವಂತರು ಆತಂಕ ವ್ಯಕ್ತಪಡಿಸಿದ್ದಾರೆ, ರಾಜಕೀಯ ಪಕ್ಷಗಳು ತಮಗೆ ಸಂಬಂಧಿಸಿಲ್ಲವೆಂದು ಮುಗುಮ್ಮಾಗಿವೆ. ಇದು ತಳ್ಳಿಹಾಕುವ ವಿಚಾರವಲ್ಲ ಗಂಭೀರವಾಗಿ ಆಲೋಚಿಸಬೇಕಾದ ಸಂಗತಿ ಎಂಬುದನ್ನು ಅರಿಯಬೇಕು.

ಈ ದೇಶದ ಸಾಮಾನ್ಯ ಜನತೆ ಗಮನಿಸಬೇಕು, ಜಾಗತೀಕರಣದ ಬಿಸಿ ದೇಶದ ಎಲ್ಲ ವ್ಯಾವಹಾರಿಕ ವಲಯಗಳನ್ನು ಆಪೋಶನ ತೆಗೆದುಕೊಳ್ಳಲಾರಂಭಿಸುತ್ತಿದ್ದಂತೆ ಚಿಲ್ಲರೆ ವಹಿವಾಟು ವಲಯದಲ್ಲೂ ಜಾಗತಿಕ ವ್ಯವಹಾರದ ಅವಕಾಶಗಳನ್ನು ನೀಡಲಾಗುತ್ತಿದೆ. ಅಭಿವೃದ್ದಿಯ ನೆಪದಲ್ಲಿ ದೇಶದ ಬೆನ್ನೆಲುಬಾದ ರೈತರ ಕೃಷಿ ಭೂಮಿಯನ್ನು ಕಿತ್ತು ಉದ್ದಿಮೆ ದಾರರಿಗೆ ಹೂಡಿಕೆದಾರರಿಗೆ ಡಿ ನೋಟೀಫೈ ಮಾಡುತ್ತಿರುವುದಾರಿಂದ ದೇಶದ ಆರ್ಥಿಕ ಪರಿಸ್ಥಿತಿ ಅಯೋಮಯವಾಗುತ್ತಿದೆ.ಆಹಾರ ಪದಾರ್ಥಗಳ ಉತ್ಪಾದನೆ ಕುಂಠಿತವಾಗಿದೆ, ದುಡಿಯುವ ಕೈಗಳಿಗೆ ಉದ್ಯೋಗವಿಲ್ಲದಂತಾಗಿದೆ, ಶಿಕ್ಷಣ,ಆರೋಗ್ಯಸೇವೆಗಳು ಮಾರಾಟದ ಸರಕಾಗಿವೆ,  ರೂಪಾಯಿಯ ಬೆಲೆ ಡಾಲರ್ ಎದುರು ಕುಸಿದಿದೆ. ದಿನಬಳಕೆ ಪದಾರ್ಥಗಳ ಬೆಲೆ ಏರಿಕೆ ಯದ್ವಾ ತದ್ವಾ ಏರಿದೆ, ಪೆಟ್ರೋಲು, ಡಿಸೆಲ್, ಅಡುಗೆ ಅನಿಲದ ಬೆಲೆ ತಿಂಗಳಿಗೆ, 15ದಿನಕ್ಕೆ ದಿಕ್ಕು ದೆಸೆಯಿಲ್ಲದಂತೆ ಏರುತ್ತಿದೆ.ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ಅವಕಾಶಗಳು ಬಿಸಿಲ್ಗುದುರೆಯಾಗಿದೆ.ಇಂತಹ ಪರಿಸ್ಥಿತಿಯಲ್ಲಿ ಸಾಮಾನ್ಯ ಜನತೆ ಬದುಕು ಸಾಗಿಸುವುದು ಹೇಗೆ?
         ಜನಸಾಮಾನ್ಯರ ಸಂಕಷ್ಠಗಳನ್ನು ಸರ್ಕಾರಗಳು ಕೇಳುತ್ತಿಲ್ಲ, ವಿರೋಧ ಪಕ್ಷಗಳು ಆಲಿಸುತ್ತಿಲ್ಲ, ಧ್ವನಿಯೆತ್ತುತ್ತಿಲ್ಲ, ಹೀಗಿರುವಾಗ ಜನಸಾಮಾನ್ಯ ತಾನೆ ಏನು ಮಾಡಿಯಾನು? ಹರ್ವಿಂದರ್ ಸಿಂಗ್ ಇಂತಹ ಸಮಸ್ಯೆಗಳ ಪ್ರತಿನಿಧಿಯಾಗಿ ಒಬ್ಬ ಟ್ರಕ್ ಚಾಲಕನಾಗಿ ತನ್ನ ಅಸಹನೆಯನ್ನು ಹೊರಹಾಕಿದ್ದಾನೆ. ಆತ ಹೊರ ಹಾಕಿದ ಆಕ್ರೋಶ ನಾಗರೀಕತೆಯ ಲಕ್ಷಣವಾಗಿಲ್ಲದಿರ ಬಹುದು ಆದರೆ  ಅದು ಅನಿವಾರ್ಯದ ಸಂಕೇತವೂ ಹೌದಲ್ಲವೇ? ಉಸಿರುಗಟ್ಟಿದ ವಾತಾವರಣದಲ್ಲಿ ಸಾಮಾನ್ಯ ನಾಗರಿಕ ಇನ್ನೇನು ತಾನೆ ಮಾಡಲು ಸಾಧ್ಯ?
           ಇಂತಹ ದುಸ್ಥಿತಿಗೆ ಭ್ರಷ್ಟಾಚಾರವೂ ಮೂಲ ಕಾರಣವೆಂಬುದರಲ್ಲಿ  ಎರಡು ಮಾತಿಲ್ಲ, ಸಧ್ಯ ಅಣ್ಣಾ ಹಜಾರೆ ಗೆ ಮಾತು ಕೊಟ್ಟಂತೆ ಕೇಂದ್ರ ಸರ್ಕಾರ ಪರಿಷ್ಕೃತ ಜನಲೋಕಪಾಲ ಮಸೂದೆಯನ್ನು ಈಗ ನಡೆಯುತ್ತಿರುವ  ಸಂಸತ್   ನಲ್ಲಿ ಮಂಡಿಸಲಿದೆ, ಈ ಸನ್ನಿವೇಶದಲ್ಲಿ ಭ್ರಷ್ಟಾಚಾರ ದವಿರುದ್ದ ರಾಜ್ಯದಲ್ಲಿ ಜನರನ್ನು ಸಂಘಟಿಸಿ ನೇತೃತ್ವ ವಹಿಸಿದ್ದ ಮಾಜ  ಿಲೋಕಾಯುಕ್ತಸಂತೋಷ್    ಹೆಗಡೆಯವರ ವಿರುದ್ದ ಬಿಜೆಪಿ ಸೇರಿದಂತೆ ಇತರೆ ರಾಜಕೀಯ ಪಕ್ಷಗ ಳು ಮನೋಸಾಮರ್ತ್ಯ  ಕುಂದಿಸುವರೀತಿಯಲ್ಲಿ ನಡೆದುಕೊಳ್ಳುತ್ತಿವೆ. ವಿನಾಕಾರಣದ ಆಪಾದನೆಗಳನ್ನು ಮಾಜಿ ಸಿ ಎಂ ಯಡಿಯೂರಪ್ಪ ಮಾಡುತ್ತಿದ್ದಾರೆ. ಗಣಿ ದುಡ್ಡು ತಿಂದ ಕೆಲ ಪತ್ರಕರ್ತರು ಸಂತೋಷ್ ಹೆಗಡೆಯವರನ್ನು ವಿನಾಕಾರಣ ಹಳಿಯುವ ವರದಿಗಳನ್ನು ಪ್ರಕಟಿಸುತ್ತಾ ಸಾರ್ವಿಜನಿಕವಾಗಿ ಅಸಹ್ಯ ಸೃಷ್ಟಿಸುತ್ತಿದೆ, ಇಂತಹ ಸನ್ನಿವೇಶದಲ್ಲಿ ಸಂತೋಷ್ ಹೆಗಡೆಗೆ ನೈತಿಕ ಸ್ತ್ಐರ್ಯ ತುಂಬುವ ಕೆಲಸ ಆಗಬೇಕಾಗಿದೆ. ಭ್ರಷ್ಟಾಚಾರದ ವಿರುದ್ದದ ಹೋರಾಟ ಕ್ಕೆ ಬೆಂಬಲಿಸುವ ನಿಟ್ಟಿನಲ್ಲಿ ಹಾಸನ ಪ್ರಗತಿ ಪರ ಚಿಂತಕರು "ಸಂತೋಷ್ ಹೆಗಡೆ ಭಾವಚಿತ್ರಗಳನ್ನು ಸಾರ್ವಜನಿಕ ಸ್ಥಳದಲ್ಲಿ ಹಾಕಿ  ವಿಚಾರಬೆಂಬಲ ಪಡೆಯುವ ಆಂಧೋಲನ ಆರಂಭಿಸಿದ್ದಾರೆ. ಅದೇ ರೀತಿ ನೀವು ನಿಮ್ಮೂರಿನಲ್ಲಿ ಭ್ರಷ್ಟಾಚಾರದ ವಿರುದ್ದ ನಿಮ್ಮೊಂದಿಗೆ ನಾವಿದ್ದೇವೆ ಎಂಬ ಘೋಷಣಾ ಫಲಕದ ಸಂತೋಷ್ ಹೆಗಡೆ ಚಿತ್ರವನ್ನು ಹಾಕ ಬಹುದಲ್ಲವೇ?

ಮಾಧ್ಯಮದ ಅಂಗಡಿಗಳು ಮತ್ತು ಪತ್ರಕರ್ತರು!

ಕಾಸ್ಟ್ ಕಟಿಂಗ್ ಮತ್ತು ನಿಶ್ಚಿತ ಆದಾಯದ ಕೊರತೆಯಿಂದ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಪರ್ಫಾರ್ಮೆನ್ಸ್ ವೀಕ್ ಎಂಬ ಕಾರಣ ನೀಡಿ ತೆಗೆಯುವ ಪ್ರಕ್ರಿಯೆ ಈಗ ನಡೆಯುತ್ತ...