Sunday, September 23, 2012

ಅಸೀಂ ತ್ರಿವೇದಿ ಎಂಬ ಅವಿವೇಕಿ ರಾಜದ್ರೋಹಿ!

ದು ಸೆಪ್ಟಂಬರ್ 9, ಅಸೀಂ ತ್ರಿವೇದಿ ಎಂಬ ವ್ಯಂಗ್ಯ ಚಿತ್ರಕಾರ ಮೂರ್ಖತನ ಹಾಗೂ ಅವಿವೇಕದಿಂದ ಬಂಧನಕ್ಕೊಳಗಾಗಿದ್ದ  ಅಷ್ಟೇ ಅಲ್ಲ ತಾನು ಮಾಡಿದ ಘನಂದಾರಿ ಕೆಲಸಕ್ಕೆ ತನ್ನ ವಿರುದ್ದದ ಮೊಕದ್ದಮೆ ಕೈ ಬಿಡಬೇಕು, ಜಾಮೀನು ಸಿಕ್ಕರೂ ಬೇಡ ಎಂದು ರಚ್ಚೆ ಹಿಡಿದು ಕುಳಿತು ಅನಾಯಾಸವಾಗಿ ರಾಷ್ಟ್ರಾಧ್ಯಂತ ಪ್ರಚಾರ ಪಡೆದ ಭೂಪ!.  ಆತ ಅಣ್ಣಾ ಹಜಾರೆ ತಂಡದ ಬೆಂಬಲಿಗ ಮತ್ತು ಕರಪ್ಷ್ಯನ್ ಎಗೆನಸ್ಟ್ ಇಂಡಿಯಾದ ಸದಸ್ಯನೂ ಹೌದು. ಅಷ್ಟಕ್ಕೂ ಈತ ಮಾಡಿದ ಘನಂಧಾರಿ ಕೆಲಸ ಏನು? ಇವನನ್ನು ಬಂಧಿಸಿದ್ದೇಕೆ? ವ್ಯಂಗ್ಯ ಚಿತ್ರ ರಾಜದ್ರೋಹ ಹೇಗಾದೀತು? ತ್ರಿವೇದಿಯನ್ನ ಅಣ್ಣಾ ತಂಡ ಬೆಂಬಲಿಸೋದ್ಯಾಕೆ? ತ್ರಿವೇದಿಯ ವಿಚಾರದಲ್ಲಿ 'ಅಭಿವ್ಯಕ್ತಿ' ಸ್ವಾತಂತ್ರ್ಯದ ಹರಣ ಆಗಿದೆಯೇ? ಎಂಬ ವಿಚಾರದ ಚರ್ಚೆ ಅಗತ್ಯವಾಗಿ ಆಗಬೇಕಿದೆ.

          ಅಸೀಂ ತ್ರಿವೇದಿ 25ರ ಹರೆಯದ ಬಿಸಿ ರಕ್ತದ ತರುಣ, ಹುಟ್ಟಿದ್ದು ಮಹಾರಾಷ್ಟ್ರದ ನಾಸಿಕ್ ಬಳಿಯ ಶುಕ್ಲಗಂಜ್ ಎಂಬ ಊರಿನಲ್ಲಿ. ವಿವಾದಾತ್ಮಕ ರಾಜಕೀಯ ವ್ಯಂಗ್ಯ ಚಿತ್ರಕಾರನಾದ ಈತ 'ಕಾರ್ಟೂನ್ಸ್ ಎಗೆನಸ್ಟ್ ಕರಪ್ಷ್ಯನ್' ಎಂಬ ಅಂತರ್ಜಾಲ ತಾಣ ನಡೆಸುವ ಜೊತೆಗೆ ಹಿಂದಿ ಪತ್ರಿಕೆಗಳಿಗೆ ಪ್ರೀ ಲಾನ್ಸ್ ಕಾರ್ಟೂನಿಸ್ಟ್. ತನ್ನ ಅಂತರ್ಜಾಲ ತಾಣದಲ್ಲಿ ಈ ಮೇಲೆ ಪ್ರಕಟಿಸಲಾಗಿರುವ ಮಾದರಿಯ ಅನೇಕ ಚಿತ್ರಗಳನ್ನು ವ್ಯಂಗ್ಯದ ತಳಹದಿಯಲ್ಲಿ ಬರೆದಿದ್ದಾನೆ. ಆ ಚಿತ್ರಗಳಾದರೂ ಎಂಥಹವು? ದೇಶದ ಘನತೆಯ ಪ್ರತೀಕವಾಗಿರುವ ಮೂರು ಸಿಂಹಗಳ ಲಾಂಛನದ ಬದಲಿಗೆ 3ತೋಳಗಳ ಚಿತ್ರ, ಅಶೋಕ ಚಕ್ರದ ಬದಲಿಗೆ ಮನುಷ್ಯ ತಲೆಬುರುಡೆ ಚಿಹ್ನೆ ಜೊತೆಗೆ ಎಚ್ಚರಿಕೆಯ ಸಂದೇಶ, ಭಾರತದ ಸಂವಿಧಾನ ಪುಸ್ತಕದ ಮೇಲೆ ನಾಯಿರೂಪದ ಉಗ್ರ ಕಸಬ್ ಕಾಲೆತ್ತಿ ಗಲೀಜು ಮಾಡುತ್ತಿರುವ ಚಿತ್ರ, ಭಾರತದ ಸಂಸತ್ ಭವನವನ್ನು ಮಲವಿಸರ್ಜಿಸುವ ಕಮೋಡ್ ರೀತಿ ಚಿತ್ರಿಸಿ ಮತದಾನ ಪತ್ರವನ್ನು ಟಿಶ್ಯೂ ಪೇಪರ್ ಹಾಗೂ ಸಂಸದರನ್ನು ಮಲದ ಮೇಲೆ ಹಾರಾಡುವ ನೊಣಗಳಂತೆ ಚಿತ್ರಿಸಿರುವುದು, ರಾಷ್ಟ್ರ ಪಕ್ಷಿಯ ಸ್ಥಾನದಲ್ಲಿ ರಣಹದ್ದಿನ ಚಿತ್ರ, ಭಾರತ ಮಾತೆಯನ್ನ ಸಾರ್ವಜನಿಕವಾಗಿ ರೇಪ್ ಮಾಡುವ ಚಿತ್ರ ಹೀಗೆ ಒಂದೇ ಎರಡೆ ರಾಷ್ಟ್ರದ ಅಂತ: ಶಕ್ತಿಯ ಪ್ರತೀಕವಾದ ಸಂಕೇತಗಳನ್ನು ಮನಬಂದಂತೆ ಚಿತ್ರಿಸಲಾಗಿದೆ.ಹೀಗೆ ರಚಿಸಿದ  ಅಂತರ್ಜಾಲ ತಾಣದ ಅತ್ಯಂತ ಶಾರ್ಪ್ ಎನಿಸುವಂತಹ  ವ್ಯಂಗ್ಯ ಚಿತ್ರಗಳ ಪ್ರದರ್ಶನವನ್ನು ಮುಂಬೈ ಮೆಟ್ರೊಪಾಲಿಟನ್ ರೀಜನಲ್ ಡೆವಲಪ್ ಮೆಂಟ್ ಅಥಾರಿಟಿ ಯಲ್ಲಿ ಮೊದಲ ಭಾರಿಗೆ ಪ್ರದರ್ಶಿಸುವ ಹುಂಬತನವನ್ನು ತೋರಿದ್ದ. ಮುಂಬೈ ಮೂಲದ ವಕೀಲ ಹಾಗೂ ಕಾಂಗ್ರೆಸ್ ಮುಖಂಡ ಆರ್ ಪಿ ಪಾಂಡೆ ಮುಂಬೈ ಕ್ರೈಂ ಬ್ರಾಂಚ್ ಪೋಲೀಸರಿಗೆ ನೀಡಿದ ದೂರಿನ ಮೇರೆಗೆ 27 ಡಿಸೆಂಬರ್ 2011ರಲ್ಲಿ ಅವಹೇಳನಕಾರಿ ಚಿತ್ರಗಳ ಈತನ ಅಂತರ್ಜಾಲ ತಾಣವನ್ನ ಮುಂಬೈ ಪೋಲೀಸರು ನಿಷೇಧಿಸಿದ್ದರು. ಒತ್ತಡಗಳ ನಡುವೆ ತೀರ ತಡವಾಗಿ ಅಂದರೆ ಅಣ್ಣಾಹಜಾರೆ ತಂಡ ಮುಂಬೈನಲ್ಲಿ ನಡೆಸಿದ ಭ್ರಷ್ಟಾಚಾರ ವಿರೋಧಿ ಪ್ರತಿಭಟನೆ ವೇಳೆ ಈತ ರಚಿಸಿದ್ದ ವ್ಯಂಗ್ಯ ಚಿತ್ರಗಳನ್ನು ಪ್ಲೈ ಕಾರ್ಡ್ಗಳ ಮೂಲಕ ಪ್ರದರ್ಶಿಸಿದ್ದರಿಂದ ಜನವರಿ  2012ರಲ್ಲಿ ಅಸೀಂ ತಿವಾರಿಯ ವಿರುದ್ದ 124(ಎ) ಭಾರತೀಯ ದಂಡ ಸಂಹಿತೆ, ಮಾಹಿತಿ ತಂತ್ರಜ್ಞಾನ ಕಾಯ್ದೆ 66 ಎ ಪ್ರಕರಣ ದಾಖಲಾಯಿತು. ಅಂದಿನಿಂದ ತಲೆ ಮರೆಸಿಕೊಂಡಿದ್ದ ಈತ ಮತ್ತೆ ತನ್ನ ಚಾಳಿಯನ್ನ ಮುಂದುವರೆಸಿದ್ದ. ಕೇಂದ್ರ ಸಚಿವ ಕಪಿಲ್ ಸಿಬಲ್ ಮತ್ತಿತರರ ವಿರುದ್ದ ಪ್ರಚೋದನಾಕಾರಿಯಾದ ಮತ್ತು ತೀರ ವೈಯುಕ್ತಿಕ ಎನಿಸುವ ಅಂಶಗಳನ್ನು ವ್ಯಂಗ್ಯ ಚಿತ್ರದ ಮೂಲಕ ಹೊರ ಹಾಕಿದ್ದ. ಇದೇ ವೇಳೆ ಕಲ್ಕತ್ತಾದಲ್ಲಿ ಮುಖ್ಯ ಮಂತ್ರಿ ಮಮತಾ ಬ್ಯಾನರ್ಜಿ ತನ್ನ ವ್ಯಂಗ್ಯ ಚಿತ್ರ ರಚಿಸಿದ ವ್ಯಂಗ್ಯಚಿತ್ರಕಾರನ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಕ್ರಮಕ್ಕೆ ಮುಂದಾದಾಗ ಅದೇ ಘಟನೆಯನ್ನು ತನ್ನ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು ಸೇವ್ ಯುವರ್ ವಾಯ್ಸ್ ಎಂಬ ಅಂತರ್ಜಾಲ ತಾಣ ಚಳುವಳಿಯನ್ನು ಹುಟ್ಟುಹಾಕಿದ್ದ. ಮುಂಬೈನ ಬಾಂದ್ರಾ ಮೆಟ್ರೋಪಾಲಿಟನ್ ಕೋರ್ಟ್ ಜಾಮೀನು ರಹಿತ ವಾರಂಟ್ ಅನ್ನು ತ್ರಿವೇದಿಯ ಬಂಧನಕ್ಕಾಗಿ ಆಗಸ್ಟ್ ತಿಂಗಳಲ್ಲಿ ಹೊರಡಿಸಿದಾಗ ಚುರುಕಾದ ಪೋಲೀಸರು 
ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯ ಗಂಗಾಘಾಟ್ ಬಳಿ ಸೆ.8ರಂದು ಅಸೀಂ ತ್ರಿವೇದಿಯನ್ನು ಬಂಧಿಸಿ ನ್ಯಾಯಾಲಯದ ಮುಂದೆ ಹಾಜರು ಪಡಿಸಿದರು. ನ್ಯಾಯಾಲಯ ತ್ರಿವೇದಿಯನ್ನು ಸೆ.24ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಅಷ್ಟೇ ಅಲ್ಲ ಆತನ ವಿರುದ್ದ ಹೂಡಲಾಗಿರುವ ರಾಜದ್ರೋಹದ ಆಪಾದನೆಯ ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿಯ ಬಯಸಿದೆ.ಇಂದಿಗೆ (ಸೆ.24) ಆತನ ನ್ಯಾಯಾಂಗ ಬಂಧನ ಅವಧಿ ಮುಗಿಯುತ್ತಿದೆ. ಒಂದೊಮ್ಮೆ ಅಪರಾಧ ಸಾಬೀತಾದರೆ ತ್ರಿವೇದಿಗೆ 2ವರ್ಷ ಜೈಲು ಶಿಕ್ಷೆ ಜೊತೆಗೆ 5000ರೂ ದಂಡ ತೆರಬೇಕಾತ್ತದೆ. ಇಂತಹುದೇ ಪ್ರಕರಣದಲ್ಲಿ ಒಮ್ಮೆ ತಮಿಳುನಾಡಿನ ಫ್ರಂಟ್ ಲೈನ್ ಪತ್ರಿಕೆ ಶಿಕ್ಷೆ ಅನುಭವಿಸಿತ್ತೆಂಬುದು ಇಲ್ಲಿ ಸ್ಮರಣೀಯ.

        ಇಡೀ ಪ್ರಕರಣದಲ್ಲಿ ಅಸೀಂ ತ್ರಿವೇದಿಯ ವಿರುದ್ದ ಹೂಡಲಾಗಿರುವ ರಾಜದ್ರೋಹದ ಆಪಾದನೆ ಆತನ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನವಾಗಿದೆ ವ್ಯವಸ್ಥೆಯ ವ್ಯಂಗ್ಯವನ್ನು ಆತ ವ್ಯಕ್ತಪಡಿಸಿದ್ದಾರೆ ಇದು ರಾಜ ದ್ರೋಹವಲ್ಲ ಎಂದು ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾದ ಅಧ್ಯಕ್ಷ ಮಾರ್ಕಂಡೇಯ ಖಟ್ಜು ಸೇರಿದಂತೆ ಪ್ರಮುಖ ಪತ್ರಿಕೆಗಳ ಸಂಪಾದಕೀಯದಲ್ಲಿ ಮೂಂಬೈ ಪೋಲೀಸರ ಕ್ರಮವನ್ನು ಟೀಕಿಸಲಾಗಿದೆ.ಅಷ್ಟೇ ಅಲ್ಲ ಕನ್ನಡದ ಪ್ರಮುಖ ದಿನಪತ್ರಿಕೆ ಪ್ರಜಾವಾಣಿಯಲ್ಲಿ ಕೆಲ ತಿಂಗಳ ಹಿಂದೆ ಅಂಬೇಡ್ಕರ್ ಕುರಿತ ವ್ಯಂಗ್ಯ ಚಿತ್ರಕ್ಕೆ ತಮಿಳುನಾಡಿನಲ್ಲಿ ಆಕ್ಷೆಪ ವ್ಯಕ್ತವಾದದ್ದನ್ನು ಸಮೀಕರಿಸಿ ಅಸೀಂ ತ್ರಿವೇದಿ ಯ ಬೆಂಬಲಕ್ಕೆ ನಿಂತಿದ್ದಾರೆ.ಕಾಂಗ್ರೆಸ್ ವಿರೋಧಿ ಧೋರಣೆಯ ಬಿಜೆಪಿ ಮತ್ತಿತರ ವಿರೋಧ ಪಕ್ಷಗಳು ಈ ಪ್ರಕರಣವನ್ನು ಅನುಕೂಲ ಸಿಂಧುವಾಗಿ ಬಳಸಿಕೊಂಡಿವೆ.  ಅಭಿವ್ಯಕ್ತ ಸ್ವಾತಂತ್ರ್ಯ ಹರಣ ಎಂಬುದೇನೋ ಸರಿ ಆದರೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೂ ಒಂದು ಇತಿಮಿತಿ ಎಂಬುದು ಇದೆಯಲ್ಲವೇ? ರಾಜಕಾರಣಿಗಳನ್ನ, ಅಧಿಕಾರಸ್ಥರನ್ನ ಮತ್ತು ಸಮಾಜ ಘಾತುಕರನ್ನ ಎಲ್ಲೆಯ ಚೌಕಟ್ಟಿನಲ್ಲಿ ಟೀಕಿಸುವುದು ಖಂಡಿತಾ ತಪ್ಪಲ್ಲ. ಆದರೆ ದೇಶದ ಘನತೆಯ ಪ್ರತೀಕವಾದವುಗಳನ್ನ ಕೀಳು ಅಭಿರುಚಿಯಲ್ಲಿ ಚಿತ್ರಿಸುವುದು ಎಷ್ಟು ಸರಿ? ಅದು ಖಂಡಿತವಾಗಿಯೂ ದೇಶ ದ್ರೋಹವೇ ಹೌದಲ್ಲ.ಕೆಲವು ತಿಂಗಳ ಹಿಂದೆ ವಿವಾದಕ್ಕೆಡೆಯಾದ ಅಂಬೇಡ್ಕರ್ ಕುರಿತ ಚಿತ್ರ ಒಂದು ಕಾಲಘಟ್ಟಕ್ಕೆ ಸರಿ, ಸ್ವತ: ಅಂಬೇಡ್ಕರ್ ಈ ಕುರಿತು ನಕ್ಕು ಸುಮ್ಮನಾಗಿದ್ದರಂತೆ. ಆದರೆ ಅದನ್ನೇ ಮಕ್ಕಳ ಪಠ್ಯದಲ್ಲಿ ಅಳವಡಿಸುವುದು ಯಾವ ಕಾರಣಕ್ಕೂ ಸಧಭಿರುಚಿಯ ಲಕ್ಷಣವಲ್ಲ ಹಾಗಿದ್ದಾಗ ಈ ಪ್ರಕರಣವನ್ನು ಅಸೀಂ ತ್ರಿವೇದಿಯ ವ್ಯಂಗ್ಯ ಚಿತ್ರಗಳ ಜೊತೆ ಪ್ರಜಾವಾಣಿ ಸಂಪಾದಕೀಯದಲ್ಲಿ ಹೋಲಿಸಿದ್ದು ಅದರ ಬದಲಾದ ಧೋರಣೆಯ ಬಗ್ಗೆ ಸಂಶಯ ಮೂಡುವಂತೆ ಮಾಡಿದೆ! 

        ದೇಶದ ಘನತೆಯ ಪ್ರತೀಕವಾದ ಸಂಕೇತಗಳನ್ನು ಕೀಳು ಅಭಿರುಚಿಯಲ್ಲಿ ಚಿತ್ರಿಸಿದ್ದನ್ನು ಯಾವ ಮಾನದಂಡದ ಆಧಾರದ ಮೇಲೆ ಅಡ್ವಾಣಿ, ಅರವಿಂದ ಕ್ರೇಜಿವಾಲ ಮತ್ತಿತರರು ಬೆಂಬಲಿಸುತ್ತಿದ್ದಾರೆ. ಸಾಂಕೇತಿಕ ವ್ಯಂಗ್ಯದ ಭಾವನೆಗಳನ್ನು ಅವರು ಒಪ್ಪಿಕೊಳ್ಳುವರೇ?  ಕೆಲವೇ ವರ್ಷಗಳ ಹಿಂದೆ ದೇಶದ ಖ್ಯಾತ ಕಲಾವಿದ ಎಂ ಎಫ್ ಹುಸೇನ್ ಹಿಂದೂ ದೇವತೆಗಳ ಕುರಿತು ರಚಿಸಿದ್ದ ಚಿತ್ರಗಳಲ್ಲಿ ಇವರಿಗೆ ಅಭಿವ್ಯಕ್ತಿ ಸ್ವಾತಂತ್ರ್ಯ ಕಂಡಿರಲಿಲ್ಲವೇ? ಮನನೊಂದು ದೇಶ ತೊರೆದ ಹುಸೇನರ ವಿರುದ್ದ ನಿಂತಿದ್ದ ಇದೇ ಗ್ಯಾಂಗ್ ಇವತ್ತು ರಾಜದ್ರೋಹಿ ಆಪಾದನೆಯಡಿ ಬಂಧಿತನಾಗಿರುವ ತ್ರಿವೇದಿಯನ್ನು ಬೆಂಬಲಿಸುತ್ತಿರುವುದರ ಹಿಂದಿನ ಹುನ್ನಾರವೇನು ಎಂಬುದು ಯಾರಿಗೂ ತಿಳಿಯದ ವಿಚಾರವೇನಲ್ಲ. ಅಷ್ಟಕ್ಕೂ ಭಾರತದಂತಹ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಅಳವಡಿಕೆಯಾಗಿರುವ ಸಂವಿಧಾನದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಕುರಿತು ಯಾವುದೇ ಉಲ್ಲೇಖಗಳಿಲ್ಲ ಆದಾಗ್ಯೂ ಅಭಿವ್ಯಕ್ತಿ ಸ್ವಾತಂತ್ರ್ಯವೆಂದರೆ ಸೀಮೀತ ಚೌಕಟ್ಟಿನಲ್ಲಿ ಆರೋಗ್ಯಕರ ಟೀಕೆ ಟಿಪ್ಪಣಿ ಇರಬೇಕೆ ವಿನಹ ಭಾವನೆಗಳನ್ನು ಕೆಣಕುವ ಯಾವುದೇ ಕ್ರಿಯೆಯೂ ಅಭಿವ್ಯಕ್ತಿ ಸ್ವಾತಂತ್ರ್ಯವೆಂದು ಬಿಂಬಿತವಾಗಬಾರದರು. ಅದು ಹುಸೇನ್ ಇರಲಿ ಅಸೀಂ ತ್ರಿವೇದಿ ಇರಲಿ ಲಂಗು ಲಗಾಮಿಲ್ಲದೇ ಅಪಚಾರ ಎಸಗುವ ಕೃತ್ಯಗಳಲ್ಲಿ ತೊಡಗಿದಾಗ ಅದು ಖಂಡಿತವಾಗಿಯೂ ಅಪರಾಧವೇ ಆಗಿರುತ್ತದೆ ಎಂಬುದು ಸತ್ಯ ಅಲ್ಲವೇ? ಇನ್ನು ಅಣ್ನಾತಂಡ ಇಡೀ ದೇಶದ ಭಾವನೆಗಳನ್ನ ಒಗ್ಗೂಡಿಸಿ ಅದನ್ನು ಕಾಯ್ದುಕೊಳ್ಳಲಾಗದೇ ಪ್ರಹಸನ ನಡೆಸಿ ವಿಸರ್ಜನೆಯಾಗಿದೆ ಆ ತಂಡದ ಹಿಂದಿನ ಹುನ್ನಾರಗಳೇನು? ಅವುಗಳ ಹಿಂದೆ ಯಾರೆಲ್ಲ ಇದ್ದಾರೆ? ಅಣ್ನಾತಂಡದ ಮುಖವಾಡವೇನು ಎಂಬುದು ಈಗಾಗಲೇ ಜಗಜ್ಜಾಹೀರಾಗಿರುವ ಸತ್ಯ ಹೀಗಿರುವಾಗ ಕಾಂಗ್ರೆಸ್ ವಿರೋಧಿ ಧೋರಣೆ ಅನುಸರಿಸುತ್ತಿರುವ ಅಣ್ಣಾತಂಡ ತ್ರಿವೇದಿಯನ್ನು ಬೆಂಬಲಿಸಿದ್ದು ಒಪ್ಪತಕ್ಕ ಮಾತೇ?

Wednesday, September 5, 2012

ಸುವರ್ಣ ಸಂಭ್ರಮದಲ್ಲಿ ಶಿಕ್ಷಕ ದಿನ ಮತ್ತು ಜಿಜ್ಞಾಸೆ!



 ಇದು ಶಿಕ್ಷಕರ ದಿನಾಚರಣೆಯ ಸುವರ್ಣ ಸಂಭ್ರಮದ ಆಚರಣೆ ಅಂದರೆ ದೇಶದಲ್ಲಿ ಶಿಕ್ಷಕರ ದಿನಾಚರಣೆ ಆರಂಭವಾಗಿ 50ವರ್ಷಗಳು ಸಂದಿವೆ. ಮೊದಲ ಶಿಕ್ಷಕರ ದಿನಾಚರಣೆ ನಡೆದದ್ದು ಸೆ.5, 1962. ಅದು ಸರ್ವೆಪಲ್ಲಿ ರಾಧಾಕೃಷ್ಣನ್ ಭಾರತದ ಉಪ ರಾಷ್ಟ್ರಪತಿಯಾಗಿ ನೇಮಕವಾದ ವರ್ಷ ಅಷ್ಟೇ ಅಲ್ಲ ರಾಧಾಕೃಷ್ಣನ್ ಜನಿಸಿದ ದಿನಾಂಕವೂ ಹೌದು. ಆದರೆ ಕುರಿತು ಜಿಜ್ಞಾಸೆ ಇರುವುದನ್ನು ಅವರ ಜೀವನ ಕುರಿತ ಪುಸ್ತಕದಲ್ಲಿ ಡಾ ಸರ್ವೆಪಲ್ಲಿ ಗೋಪಾಲ್ ಉಲ್ಲೇಖಿಸಿದ್ದಾರೆ. ಹಾಗಾಗಿ ಯುನೆಸ್ಕೋ ಘೋಷಿಸಿರುವಂತೆ ಅಕ್ಟೋಬ್ 5ರಂದು ಶಿಕ್ಷಕರ ದಿನಾಚರಣೆ ಆಚರಿಸಬೇಕೆಂಬ ಕೂಗು ಕೇಳಿ ಬರುತ್ತಿದೆ. ಏನೇ ವೈರುಧ್ಯಗಳಿದ್ದರೂ ದಿನಕ್ಕೆ 50ವರ್ಷ ಸಂದಿರುವುದರಿಂದ ಇದನ್ನೆ ಶಿಕ್ಷಕರ ದಿನವೆಂದು ಆಚರಿಸಿಕೊಂಡು ಬರಲಾಗುತ್ತಿದೆ. ಸಂಧರ್ಭದಲ್ಲಿ ಶಿಕ್ಷಕರ ಮತ್ತು ಶೈಕ್ಷಣಿಕ ವಾತಾವರಣದ ಕುರಿತು ಮಾತನಾಡಬೇಕಾದ ಅಗತ್ಯವಿದೆ.

 ಅದಕ್ಕೂ ಮುನ್ನ ಡಾ ಸರ್ವೆಪಲ್ಲಿ ರಾಧಾಕೃಷ್ಣನ್ ಕುರಿತ ಪುಟ್ಟ ಮಾಹಿತಿ ನಿಮಗಾಗಿ. ಸರ್ವೆಪಲ್ಲಿ ರಾಧಾಕೃಷ್ಣನ್  ತೆಲುಗು ಬ್ರಾಹ್ಮಣ ಬಡ ಕುಟುಂಬದಲ್ಲಿ ಹುಟ್ಟಿದ್ದು ತಮಿಳುನಾಡಿನ ತಿರುತ್ತಾನಿ ಎಂಬ ಗ್ರಾಮದಲ್ಲಿಒಬ್ಬ ತತ್ವಜ್ಞಾನಿಯಾಗಿ ಆದರ್ಶ ಪ್ರಾಧ್ಯಾಪಕನಾಗಿ ಬೆಳೆದ ಸರ್ವಪಲ್ಲಿ ರಾಧಾಕೃಷ್ಣನ್ ಸಾಧನೆಯ ಶೃಂಗಕ್ಕೇರಿ ಅಂತಿಮವಾಗಿ ಭಾರತದ ಉಪರಾಷ್ಟ್ರಪತಿ ಮತ್ತು ರಾಷ್ಟ್ರಪತಿ ಪದವಿಗೇರಿದರು. ಮೂಲಕ ಒಬ್ಬ ಸಾಮಾನ್ಯ ಶಿಕ್ಷಕ ವ್ಯಕ್ತಿಯ ನಿರ್ಮಾಣ ಮಾತ್ರವಲ್ಲದೇ ರಾಷ್ಟ್ರದ ಆಡಳಿತವನ್ನು ನಿಭಾಯಿಸುವ ಪರಮೋಚ್ಚ ಪದವಿಗೇರಬಹುದು ಎಂಬುದನ್ನು ಸಾಬಿತು ಪಡಿಸಿದರು.1909ರಲ್ಲಿ ಮದ್ರಾಸ್ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ವೃತ್ತಿ ಜೀವನ ಆರಂಭಿಸಿದರು. 1918ರಲ್ಲಿ ಮೈಸೂರು ವಿವಿಯಲ್ಲಿ ಪ್ರೋಫೆಸರ್ ಆದರು. ನಂತರ ದೇಶ ಮತ್ತು ವಿದೇಶಗಳ ಹಲವು ವಿವಿ ಗಳಲ್ಲಿ ಅವಕಾಶ ಗಿಟ್ಟಿಸುವ ಮೂಲಕ ಸಾಧನೆ ಗೈದರು. ಪೌರಾತ್ಯ ಮತ್ತು ಪಾಶ್ಚಿಮಾತ್ಯ ತತ್ವ ಜ್ಞಾನದ ಪದ್ದತಿಗಳನ್ನು ವಿವರವಾಗಿ ರಚಿಸಿದ ರಾಧಾಕೃಷ್ಣನ್ ತನ್ನ ವಿದ್ವತ್ ನಿಂದಾಗಿ ಕಲ್ಕತ್ತಾ ಮತ್ತು ಆಕ್ಸ್ ಫರ್ಡ್ ವಿವಿಗಳಲ್ಲಿ ಅವಕಾಶ ಪಡೆದಿದ್ದರು. ಸ್ವಾತಂತ್ರ್ಯ ಪೂರ್ವದಲ್ಲಿಯೇ ಬಿಟ್ರೀಷ್ ಸಂಸ್ಥಾನ ನೀಡುತ್ತಿದ್ದ ಸರ್ ಪದವಿ ಪಡೆದಿದ್ದರು. 1954ರಲ್ಲಿ ಅವರಿಗೆ ಭಾರತ ಸರ್ಕಾರ ಜೀವಿತಾವಧಿಯಲ್ಲೇ ಭಾರತ ರತ್ನ ಪ್ರಶಸ್ತಿಯನ್ನೂ ಸಹಾ ನೀಡಿ ಗೌರವಿಸಿದೆ. ಬರಿಟೀಷ್ ಅಕಾಡೆಮಿ ಫೆಲೋಶಿಪ್ ನೀಡಿದೆಯಲ್ಲದೇ ಜರ್ಮನಿಯ ಪ್ರತಿಷ್ಟಿತ ಟೆಂಪ್ಲೆಟಾನ್ ಪ್ರಶಸ್ತಿ ಅವರ ಮುಡಿಗೇರಿದೆ. ತತ್ವಶಾಸ್ತ್ರದಲ್ಲಿನ ಅವರ ಅನುಪಮ ಸೇವೆಗಾಗಿ ಸತತವಾಗಿ 5ರವರ್ಸಗಳ ಕಾಲ ಅವರ ಹೆಸರು ನೋಬೆಲ್ ಪ್ರಶಸ್ತಿಗಾಗಿ ಶಿಫಾರಸ್ಸಾಗಿತ್ತು ಎಂಬುದು ಗಮನಾರ್ಹ. ಅವರು ರಾಷ್ಟ್ರಪತಿ ಹುದ್ದೆಗೇರುವ ಮುನ್ನ ಯುನೆಸ್ಕೋ ದಲ್ಲಿ ಭಾರತದ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸಿದರಲ್ಲದೇ ಸೋವಿಯತ್ ಯೂನಿಯನ್ ನಲ್ಲಿ ಭಾರತದ ರಾಯಭಾರಿಯಾಗಿಯೂ ಕಾರ್ಯ ನಿರ್ವಹಿಸಿದರು.ರಾಷ್ರ್ಟಪತಿಯಾಗಿದ್ದಾಗ ಅವರ ಹುಟ್ಟಿದ ಹಬ್ಬವನ್ನು ಆಚರಿಸಲು ಬಂಧುಗಳು ಮತ್ತು ಸ್ನೇಹಿತರು ಮುಂದಾದಾಗ ಅದನ್ನು ಶಿಕ್ಷಕರ ದಿನವನ್ನಾಗಿ ಆಚರಿಸುವಂತೆ ಅವರು ಸೂಚಿಸಿದ್ದರಲ್ಲದೇ ಮೂಲಕ ಸಮಸ್ತ ಶಿಕ್ಷಕ ಸಮುದಾಯಕ್ಕೆ ಗೌರವವನ್ನು ಅರ್ಪಣೆ ಮಾಡಿದ್ದಾರೆ.

            ನಡುವೆ ರಾಧಾಕೃಷ್ಣನ್ ಹೆಸರಿನಲ್ಲಿ ಶಿಕ್ಷಕರ ದಿನಾಚರಣೆ ಮಾಡುವುದರ ಕುರಿತು ಹಲವು ಆಕ್ಷೇಪಣೆಗಳು ಕೇಳಿ ಬಂದಿವೆ. ನೇರ ನಡೆ ನುಡಿಯ ದಿಟ್ಟ ವಿಮರ್ಶಕ ಪ್ರೊ. ಜಿ ಎಚ್ ನಾಯಕ ಕುರಿತ ಪ್ರಸ್ತಾವಗಳನ್ನು ಪತ್ರಿಕೆಯೊಂದರ ಮೂಲಕ ಹೊರಗೆಡವಿದ್ದಾರೆ. ರಾಧಾಕೃಷ್ಣನ್ ಪುತ್ರ ಇತಿಹಾಸಕಾರ,ಇತಿಹಾಸ ಪ್ರಾಧ್ಯಾಪಕ,ಅಂತರಾಷ್ಟ್ರೀಯ ಖ್ಯಾತಿಯ ಇತಿಹಾಸಕಾರ  ಡಾ ಸರ್ವೆಪಲ್ಲಿ ಗೋಪಾಲ್  ಬರೆದಿರುವ  "ರಾಧಾಕೃಷ್ಣನ್ - ಭಯಾಗ್ರಫಿ" ಪುಸ್ತಕದಲ್ಲಿ ಜನ್ಮ ದಿನದ ಗೋಂದಲ, ರಾಧಾಕೃಷ್ಣನ್ ಜನ್ಮದ ಕುರಿತ ಅಶ್ಲೀಲ ಕಥೆ, ಅದೇ ಕಾರಣಕ್ಕಾಗಿ ತಾಯಿಯನ್ನು ದೂರವಿರಿಸಿದ್ದು, ಅವರು ಪ್ರಾಧ್ಯಾಪಕರಾಗಿದ್ದಾಗ ಮೈಸೂರಿನಲ್ಲಿ ಪಕ್ಕದ ಮನೆಯವನ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದು ಅದೇ ಆರಂಭವಾಗಿ ಮುಂದೆ ಹಲವು ಹೆಂಗೆಳೆಯರ ಸಹವಾಸ ಮಾಡಿದ್ದು, ಅವರ ಭಾಷಣಗಳಲ್ಲಿ ಆತ್ಮವಂಚನೆಯ ಭಾಷಣಗಳನ್ನು ಮಾಡುತ್ತಿದ್ದುದು, ತನ್ನ ಐವರು ಹೆಣ್ಣು ಮಕ್ಕಳನ್ನು ಬಾಲ್ಯ ವಿವಾಹ ಮಾಡಿದ್ದು, ವೃತ್ತಿಯ ಬಗೆಗಿನ ಪ್ರೇಮದಿಂದ ಅಧಿಕಾರಕ್ಕೆ ಅಂಟಿಕೊಳ್ಳುವ ನೀತಿಯನ್ನು ಪ್ರದರ್ಶಿಸಿದ್ದು ಒಂದೇ ಎರಡೇ ಹೀಗೆ ರಾಧಾಕೃಷ್ಣನ್ ನೆಗೆಟೀವ್ ಅಂಶಗಳನ್ನು ಪ್ರಸ್ಥಾಪಿಸುವ ಮೂಲಕ ಇಂತಹವರ ಹೆಸರಿನಲ್ಲಿ ಶಿಕ್ಷಕರ ದಿನಾಚರಣೆ ಮಾಡುವುದು ಎಷ್ಟು ಸರಿ ಎಂಬ ಪ್ರಶ್ನೆಯನ್ನು ಎತ್ತಲಾಗಿದೆ. ಅದು ಸಮಂಜಸವೂ ಇರಬಹುದು ಆದರೆ ಅದೇ ಅಂತಿಮವೂ ಆಗಬೇಕಿಲ್ಲ. ಹಿಂದೆಸ್ವಾಮಿ ವಿವೇಕಾನಂದರ ಕುರಿತು ಇಂತಹುದ್ದೇ ಸತ್ಯಗಳು ಅನಾವರಣಗೊಂಡಿದ್ದವು ಅವರೊಬ್ಬ ದಡ್ಡ ಮತ್ತು ಮೂರ್ಖ, ವಾಸಿಯಾಗದ ಕಾಯಿಲೆಗಳಿದ್ದವು ಮತ್ತು ಆತ ಶುದ್ದ ಮಾಂಸಹಾರಿ ಇತ್ಯಾದಿ.ಆದರೆ ಸಮಾಜದಲ್ಲಿ ಉನ್ನತ ಧ್ಯೇಯ ಮತ್ತು ಆದರ್ಶ ಪುರುಷರಂತೆ ಕಾಣಿಸುವ ವ್ಯಕ್ತಿಗಳ ವೈಯುಕ್ತಿಕ ಬದುಕು ಏನೇ ಆಗಿದ್ದರೂ ಸಹಾ ಸಮಾಜ ಮುಖಿಯಾಗಿ ಕಾಣಿಸಿಕೊಳ್ಳುವ ವ್ಯಕ್ತಿತ್ವಗಳು ಮತ್ತು ವಿಚಾರಗಳು ಹೆಚ್ಚು ಆಧ್ಯತೆ ಪಡೆಯುತ್ತವೆ.

            ಇನ್ನು ಪ್ರಸಕ್ತ ವಿಷಯಕ್ಕೆ ಬರುವುದಾದರೆ ಶಿಕ್ಷಕ ದಿನಾಚರಣೆ ಶಿಕ್ಷಕ ಸ್ಥಾನದ ಪಾವಿತ್ರ್ಯತೆಯನ್ನು ಎತ್ತಿ ಹಿಡಿಯುವ ಗೌರವವನ್ನು ಸಾರಿ ಹೇಳುವ ದಿನ. ಹಿಂದಿನ ದಶಕಗಳಲ್ಲಿ ಗುರು ಮತ್ತು ಶಿಷ್ಯರ ನಡುವೆ ಇದ್ದ ಬಾಂಧವ್ಯಗಳು ಈಗ ಇಲ್ಲ. ಆಧುನೀಕರಣದ ಪ್ರವಾಹದಲ್ಲಿ ಶಿಕ್ಷಕ ವೃತ್ತಿಯ ಪಾವಿತ್ರ್ಯತೆಯೂ ಈಗ ಉಳಿದಿಲ್ಲ, ಶಿಕ್ಷಣ ವ್ಯಾಪಾರೀಕರಣವಾಗಿದೆ ಶಾಲೆಗಳಿಗೆ ಅಗತ್ಯಕ್ಕಿಂತ ಹೆಚ್ಚು ಸೌಲಭ್ಯಗಳು ಬಂದಿವೆ, ಸಂಬಳ-ವಗೈರೆಗಳು ಹೆಚ್ಚಿವೆ. ಜೊತೆಗೆ ಶಿಕ್ಷಕರ ಕಾರ್ಯಗಳು ವಿಸ್ತೃತವಾಗಿವೆ. ಶಿಕ್ಷಕರು ಈಗ ಮಕ್ಕಳಿಗೆ ಪಾಠ ಹೇಳುವ ಗುರುಗಳಾಗಿ ಮಾತ್ರ ಉಳಿಯದೇ ಬೇರೆ ಚಟುವಟಿಕೆಗಳು ಅವರ ಹೆಗಲೇರಿವೆ. ಕಲಿಸುವ ಉತ್ಸಾಹ ಕುಂದಿದೆ, ವಿದ್ಯಾರ್ಥಿಗಳೂ ಈಗ ಹಿಂದಿನಂತೆ ಉಳಿದಿಲ್ಲ ಶಿಕ್ಷಕರನ್ನೆ ನಿಯಂತ್ರಿಸುವ ಅಗೌರವ ತೋರುವ ಪ್ರವೃತ್ತಿಯೂ ಬೆಳೆದಿದೆ. ಇದಕ್ಕೆ ಶಿಕ್ಷಕರು ಪರೋಕ್ಷವಾಗಿ ಕಾರಣ ಎಂಬ ಮಾತನ್ನು ಅಲ್ಲಗೆಳೆಯುವಂತಿಲ್ಲ. ಶಿಕ್ಷಕರು ತಮ್ಮ ವೃತ್ತಿಯ ಗಾಂಭಿರ್ಯತೆಯನ್ನು ಅರಿಯದೇ ತೋರುವ ನಡವಳಿಕೆಗಳು, ಬಾಹ್ಯ ಚಟುವಟಿಕೆಗಳು, ಅಭಿರುಚಿಗಳು ಸ್ಥಾನದ ಪಾವಿತ್ಯತೆಯನ್ನು ಕಳೆದಿವೆ.ಪ್ರಾಮಾಣಿಕವಾಗಿ ವೃತ್ತಿಯನ್ನು ನಿರ್ವಹಿಸುವ ಪ್ರಜ್ಞೆಯನ್ನು ತೋರದೇ ರಾಜಕೀಯ, ಪುಡಾರಿತನ, ವ್ಯವಹಾರ ಮತ್ತು ಸಮಾಜ ಹೇಸಿಗೆ ಪಟ್ಟುಕೊಳ್ಳುವ ಚಟುವಟಿಕೆಗಳಲ್ಲಿ ತೊಡಗಿಕೊಂಡು ಮಾದ್ಯಮಗಳಲ್ಲಿ ಸುದ್ದಿಯಾಗುತ್ತಿರುವುದು ದುರಂತದ ಸಂಗತಿ. ಹತ್ತು ಶಿಕ್ಷಕರಲ್ಲಿ ಒಬ್ಬಿಬ್ಬರು ಪ್ರಾಮಾಣಿಕವಾಗಿ ಕೆಲಸ ಮಾಡಲು ಮುಂದಾಗುತ್ತಾರಾದರೂ ಇತರ ಶಿಕ್ಷಕರು ಅಡ್ಡಗಾಲು ಹಾಕುವ ಪ್ರವೃತ್ತಿಯಿಂದಾಗಿ ಅವರು ತಟಸ್ಥರಾಗಿ ಉಳಿಯುವ ಸಂಭವವೇ ಹೆಚ್ಚು ಇಂತಹದ್ದನ್ನು ಪ್ರತೀ ಶಾಲೆ ಮತ್ತು ಕಾಲೇಜುಗಳಲ್ಲೂ ಕಾಣಬಹುದು. ಕಲಿಕೆಯಲ್ಲೂ ಅಂತಹ ಗುಣಾತ್ಮಕ ಅಂಶಗಳನ್ನು ಕಾಣಲಾಗುತ್ತಿಲ್ಲಅಧ್ಯಯನದ ಕೊರತೆ, ಅನುಭವದ ಕೊರತೆ ಎದ್ದು ಕಾಣುತ್ತಿದ್ದು ವೈಯುಕ್ತಿಕ ಹಿತಾಸಕ್ತಿಗಳೂ ಕೂಡಾ ಶೈಕ್ಷಣಿಕ ಪ್ರಗತಿಯ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತಿವೆ. ಇಂತಹ ಸಂಧಿಗ್ಧ ಪರಿಸ್ಥಿತಿಯಲ್ಲಿ ಶಿಕ್ಷಕರು ಜಾಗೃತರಾಗಬೇಕಿದೆ. ತಮ್ಮ ಸ್ತಾನದ ಘನತೆ ಗೌರವಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ.
           
            

ಮಾಧ್ಯಮದ ಅಂಗಡಿಗಳು ಮತ್ತು ಪತ್ರಕರ್ತರು!

ಕಾಸ್ಟ್ ಕಟಿಂಗ್ ಮತ್ತು ನಿಶ್ಚಿತ ಆದಾಯದ ಕೊರತೆಯಿಂದ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಪರ್ಫಾರ್ಮೆನ್ಸ್ ವೀಕ್ ಎಂಬ ಕಾರಣ ನೀಡಿ ತೆಗೆಯುವ ಪ್ರಕ್ರಿಯೆ ಈಗ ನಡೆಯುತ್ತ...