Wednesday, April 4, 2012

"ಪ್ರೀತಿ"ಯ ಅಗಲಿಕೆ.....:(


//'ಪ್ರೀತಿ'ಯ ಬನದಲ್ಲಿ ಅರಳಿದ
ಬೊಗಸೆ ಕಂಗಳ ಮುದ್ದು ಕಂದ
ಕನಸು, ಬಯಕೆಗಳ ಗಮ್ಯ ತಲುಪುವ
ಮೊದಲೇ ಅನಿರೀಕ್ಷಿತವಾಗಿ
ಅಗಲಿಕೆ ಸರಿಯೇ? 

            //ಬೆಟ್ಟದಷ್ಟು ಆಸೆ
            ದಕ್ಕಿಸಿಕೊಳ್ಳುವ ತವಕ

            ಕುತೂಹಲದ ತುಂಟನಗೆ
            ಕನಸು ತಣಿಯುವ ಮುನ್ನ
            ವಿಧಿ ಕಸಿದದ್ದು ಸರೀನಾ?

//ಅವತ್ತು ಅಮ್ಮನ ದುಗುಡ ಧಾವಂತ
ಕಣ್ಣೀರ ಕಥೆಯ ಅನಾವರಣ
ಅಸಹಾಯಕತೆ, ಅಭದ್ರತೆಯ ಬೀತಿ
ಮದ್ಯೆ ಆಶಾಕಿರಣ,ನಂಬಿದ ದೇವನ
ನೆಮ್ಮದಿಯಲ್ಲಿ ಹೋದದ್ದೆಲ್ಲಿಗೆ?

            //ಸಂಕಟದ ಸಂತೆಯಲ್ಲಿ
            ಬದುಕಿನ ಜಂಜಡದಲ್ಲಿ
            ನಂಬಿದ ಸಖನ ಸೇವೆಯಲ್ಲಿ
            ಉದಿಸಿದ ಅಭದ್ರತೆಯ ಭಾವ
            ವಿಧಿಯಾಟಕ್ಕೆ ಶರಣಾಗಿದ್ದು ಸರಿಯೇ?

(ವರ್ಷದ ಮೊದಲ ರೇವತಿ ಮಳೆ-ಗಾಳಿಗೆ ಹಾಸನ ಜಿಲ್ಲೆಯ ಅರಕಲಗೂಡಿನಲ್ಲಿ ನಡೆದ ರಸ್ತೆ ದುರಂತದಲ್ಲಿ ಪ್ರೀತಿ ಮತ್ತು ಪ್ರೀತಿಯ ಅಮ್ಮ ವಿಧಿವಶರಾದರು ತನಿಮಿತ್ತ ಈ ಅಕ್ಷರ ಕಂಬ

ಮಾಧ್ಯಮದ ಅಂಗಡಿಗಳು ಮತ್ತು ಪತ್ರಕರ್ತರು!

ಕಾಸ್ಟ್ ಕಟಿಂಗ್ ಮತ್ತು ನಿಶ್ಚಿತ ಆದಾಯದ ಕೊರತೆಯಿಂದ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಪರ್ಫಾರ್ಮೆನ್ಸ್ ವೀಕ್ ಎಂಬ ಕಾರಣ ನೀಡಿ ತೆಗೆಯುವ ಪ್ರಕ್ರಿಯೆ ಈಗ ನಡೆಯುತ್ತ...