Wednesday, May 30, 2012

ಕನಸುಗಾರ ನಾ, ನಿಮಗೆ ಇನ್ನು ನಾ...?

ಕನ್ನಡ ಚಿತ್ರರಂಗ 70ರದಶಕದಲ್ಲಿ ಭಾರತೀಯ ಚಿತ್ರರಂಗಕ್ಕೆ ಹೊಸ ಅಲೆಯ ಚಿತ್ರಗಳನ್ನು ಕೊಡುವ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ವಿಜೃಂಬಿಸಿತ್ತು. ಸಿನಿಮಾ ಗಳೆಂದರೆ ಕನ್ನಡ ಸಿನಿಮಾಗಳಂತಿರಬೇಕು ಎಂಬ ಹಾಗೆ ಇದ್ದ ಕಾಲವದು. ಪ್ರಯೋಗಶೀಲತೆಗೆ ಹೆಸರುವಾಸಿಯಾಗಿದ್ದ ಸ್ಯಾಂಡಲ್ ವುಡ್ ನಲ್ಲಿ ಆ ವೇಳೆಗಾಗಲೇ 'ರಾಜಣ್ಣ' ಹೆಮ್ಮರವಾಗಿ ಬೆಳೆದುನಿಂತಿದ್ದರು ಶಂಕರ್ ನಾಗ್ ರಂತ ವರ್ಕಾಲಿಕ್ ನಟ-ನಿರ್ದೇಶಕ, ವಿಷ್ಣುವರ್ಧನ್ ರಂತಹ ಮೇರು ನಟರು,ಮಂಡ್ಯದ ಗಂಡು ಅಂಬರೀಷ್ ಉದಯವಾಗಿದ್ದರು.80ರ ದಶಕದ ಆರಂಬದಲ್ಲಿ ಇವರಿಗೆ ಜೊತೆಯಾಗಿದ್ದು ಟೈಗರ್ ಪ್ರಭಾಕರ್ ಇಂತಹ ದಿಗ್ಗಜರುಗಳ ಅಬ್ಬರದ ನಡುವೆಯೇ ಅದ್ದೂರಿ ಕಮರ್ಷಿಯಲ್ ಚಿತ್ರದ ಮೂಲಕ ಕನ್ನಡ ಚಿತ್ರರಂಗದ ಸಾರ್ವಕಾಲಿಕ ಸೂಪರ್ ಡೂಪರ್ ಚಿತ್ರ ಕೊಡುವ ಮೂಲಕ ಇಡೀ ದೇಶದ ಚಿತ್ರ ಪ್ರೇಮಿಗಳು ನಿಬ್ಬೆರಗಾಗಿ ಸ್ಯಾಂಡಲ್ ವುಡ್ ನತ್ತ ನೋಡುವಂತೆ ಮಾಡಿದ ಸಾಹಸಿ ಯುವಕನೇ ವಿ ರವಿಚಂದ್ರನ್! ಯುವಪೀಳಿಗೆಯಲ್ಲಿ ಮತ್ತು ಲಲನಾ ಮಣಿಯರ ನಡುವೆ ರವಿಚಂದ್ರನ್ ಎನ್ನುವ ಹೆಸರೇ ರೋಮಾಂಚನ ಉಂಟು ಮಾಡುವಂತದ್ದು. ರವಿ  ಈಗ 51 ತುಂಬಿ 52ವರ್ಷಕ್ಕೆ ಕಾಲಿಟ್ಟಿದ್ದಾರೆ, ಈ ಸಂಧರ್ಭದಲ್ಲಿ ಕನ್ನಡ ಚಿತ್ರರಂಗಕ್ಕೆ ಹೊಸತನದ ಟ್ರೆಂಡ್ ಸೃಷ್ಟಿಸಿದ ಕನಸುಗಾರ ರವಿಯ ಕುರಿತು ಅವಲೋಕಿಸುವುದು ಸೂಕ್ತವಾಗಬಹುದು.
           ರವಿಚಂದ್ರನ್ ಹೆಸರು ಕೇಳಿದರೆ ಇವತ್ತಿಗೂ ಮೈ ಪುಳಕಗೊಳ್ಳುವವರು ಎಷ್ಟೋ ಮಂದಿ ಇದ್ದಾರೆ! ಅಂತಹ ಮಾಂತ್ರಿಕ ಶಕ್ತಿಯನ್ನು ರವಿ ತನ್ನ ಚಿತ್ರಗಳ ಮೂಲಕ ಪಡೆದುಕೊಂಡ ಹೆಗ್ಗಳಿಕೆ ಪಡೆದಿದ್ದಾರೆ. ಪ್ರಯೋಗಶೀಲತೆ ಮತ್ತು ಕಲಾತ್ಮಕ ಚಿತ್ರಗಳ ಕಾಲಘಟ್ಟದ ನಂತರ ಕನ್ನಡದಲ್ಲಿ ಹೊಸಅಲೆಯ ಕಮರ್ಷಿಯಲ್ ಚಿತ್ರ ನೀಡುವ ಮೂಲಕ ಚಲನಚಿತ್ರದಲ್ಲಿ ಹೊಸ ಸಂಗೀತದ ಪರಿಚಯವನ್ನು, ಸಾಹಿತ್ಯದ ಕಸುವನ್ನು, ಹಂಸಲೇಖರಂತಹ ರತ್ನವನ್ನು ಕನ್ನಡದ ಜನತೆಗೆ ಪರಿಚಯಿಸಿದ್ದು ಒನ್ಸ್ ಎಗೇನ್ ಇದೇ ರವಿಚಂದ್ರನ್. ತಂದೆ ವೀರಾಸ್ವಾಮಿ ಚಿತ್ರ ನಿರ್ಮಾಪಕರಾಗಿದ್ದರೂ ಸಹಾ ಅವರ ಛಾಯೆಯಿಲ್ಲದೇ ಗಾಡ್ ಫಾದರ್ ಗಳ ನೆರವಿಲ್ಲದೇ ದಿಗ್ಗನೆ ಎದ್ದು ನಿಂತದ್ದು ರವಿಚಂದ್ರನ್.  1984ರಲ್ಲಿ ಪ್ರಳಯಾಂತಕ ಚಿತ್ರದ ಮೂಲಕ ಕನ್ನಡ ಬೆಳ್ಳಿತೆರೆಗೆ ಎಂಟ್ರಿ ಪಡೆದ ರವಿ ಖಳನಾಗಿ ಅಭಿನಯಿಸಿದ್ದರು ಅದೂ ಮಾತಿಲ್ಲದ ಪಾತ್ರದಲ್ಲಿ ! ಪೂರ್ಣ ಪ್ರಮಾಣದ ಹೀರೋ ಆಗಿ ಅವತರಿಸಿದ್ದು 'ನಾನೇರಾಜ' ಚಿತ್ರದ ಮೂಲಕ. ಅಲ್ಲಿಂದ ಮುಂದೆ ಬಂದ ಹಲವು ಚಿತ್ರಗಳಲ್ಲಿ ಸೈಕಲ್ ಹೊಡೆದರು, ದೊಡ್ಡ ಬ್ರೇಕ್ ನೀಡಿದ್ದು ಮಾತ್ರ 1987ರಲ್ಲಿ ರವಿ ಆಲ್ ಇನ್ ಒನ್ ಆಗಿ ನಟಿಸಿ ನಿರ್ದೇಶಿಸಿ ನಿರ್ಮಿಸಿದ 'ಪ್ರೇಮಲೋಕ'ಚಿತ್ರ. ಹಲವು ಹೊಸತನಗಳಿಗೆ ಹೊಸಪ್ರತಿಭೆಗಳಿಗೆ ನಾಂದಿ ಹಾಡಿದ ಈ ಚಿತ್ರದ ನಂತರ ರವಿಚಂದ್ರನ್ ನಟಿಸಿದ ರಣದೀರ, ಶಾಂತಿಕ್ರಾಂತಿ, ಯುದ್ದಕಾಂಡ, ಅಂಜದಗಂಡು ಹೀಗೆ ಒಂದೇ ಎರಡೇ ಸಾಲು ಸಾಲಾಗಿ ಯಶಸ್ವಿ ಚಿತ್ರಗಳನ್ನು ಕೊಟ್ಟರು. ಯುವಜನತೆ ರವಿಚಂದ್ರನ್ ಸಿನಿಮಾಗಳೆಂದರೆ ಕಾದು ಕೂರುವಂತ ಪರಿಸ್ಥಿತಿ ಸೃಷ್ಟಿಯಾಯಿತು, ಎಲ್ಲ ವರ್ಗದ ಜನರಿಗೂ ರವಿ ಇಷ್ಟವಾಗುವಂತಹ ಪಾತ್ರಗಳಲ್ಲಿ ಬಂದು ಹೋದರು. ನಿಜ ಹೇಳಬೇಕೆಂದರೆ 80ರ ದಶಕದಲ್ಲಿ ಉತ್ತುಂಗದಲ್ಲಿದ್ದ ಅಂಬಿ ಮತ್ತು ವಿಷ್ಣು ಜೊತೆಗೆ ಸರಿಸಮನಾಗಿ ಮತ್ತು ವಿಭಿನ್ನವಾದ ಇಮೇಜ್ ಸೃಷ್ಟಿಸಿಕೊಂಡರು. ಜನರಿಗೆ ಹೊಸ ನೋಟದ ಸವಿಯನ್ನು ಉಣಬಡಿಸಿದರು. ರವಿ ಚಿತ್ರಗಳ ಹಾಡುಗಳು, ಅದ್ದೂರಿತನ, ಕಲಾತ್ಮಕತೆ, ತಾಂತ್ರಿಕ ನೈಪುಣ್ಯತೆ, ಕಲ್ಪನೆ ಗಳನ್ನು ಬೇರೆಯವರ ಸಿನಿಮಾಗಳಲ್ಲಿ ಕಾಣಲು ಸಾಧ್ಯವೇ ಇಲ್ಲವೇನೋ ಎನ್ನುವಷ್ಟರ ಮಟ್ಟಿಗೆ ರವಿ ಬೆಳೆದು ನಿಂತರು. ಏಕಾಂಗಿ ಎಂಬ ಚಿತ್ರವನ್ನು ಮಹತ್ವಾಕಾಂಕ್ಷೆಯಿಂದ ನಿರ್ಮಿಸಿದರಾದರೂ ಗಲ್ಲಾ ಪೆಟ್ಟಿಗೆಯಲ್ಲಿ ಅದು ಯಶಸ್ಸು ಕಾಣದಿದ್ದುದರಿಂದ ಮಂಕಾದ ರವಿ ನಂತರದ ದಿನಗಳಲ್ಲಿ ಸೋಲುಗಳನ್ನು ಕಂಡರು. ಈ ನಡುವೆ ವಿವಾದಗಳು ರವಿಯನ್ನು ಅರಸಿಕೊಂಡು ಬಂದವು, ಹಳ್ಳಿಮೇಷ್ಟ್ರು ಸಿನಿಮಾ ನಾಯಕಿಯಾಗಿದ್ದ ಬಿಂದಿಯಾ, ರವಿ ಮೇಲೆ ಮಾಡಿದ ಆರೋಪ ಇಮೇಜ್ ಕೆಡಿಸದಿದ್ದರೂ ವಿವಾದಕ್ಕೆ ತಾನೇನೂ ಹೊರತಲ್ಲ ಎಂಬುದನ್ನು ಸಾಬೀತು ಪಡಿಸಿತು. ಬಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಹೆಸರು ಮಾಡಿದ ಜೂಹಿಚಾವ್ಲಾ ಮತ್ತು ಖುಷ್ ಬೂ ಗೆ ಮೊದಲ ಅವಕಾಶ ನೀಡಿ ಬೆಳ್ಳಿತೆರೆಗೆ ಪರಿಚಯಿಸಿದ ರವಿಚಂದ್ರನ್ ಅನೇಕ ಹೊಸ ಮುಖಗಳನ್ನು ಕನ್ನಡಕ್ಕೆ ತಂದಿದ್ದಾರೆ. 
          ಹೀಗಿರುವಾಗಲೇ ಇತ್ತೀಚಿನ 'ನರಸಿಂಹ', ದಶಮುಖ ದಂತಹ ಪ್ಲಾಪ್ ಚಿತ್ರಗಳ ಸೋಲಿನ ನಡುವೆಯ ಕನಸಿನ ಮಂಜಿನ ಹನಿ ಎಂಬ ಚಿತ್ರವನ್ನು 3-4ವರ್ಷಗಳಿಂದ ನಿರ್ಮಿಸುತ್ತಲೇ ಇದ್ದಾರೆ. ಅದು ತಾನಂದುಕೊಂಡಂತೆ ಬಂದಿಲ್ಲ ಮತ್ತೆ ಮೂರನೇ ಬಾರಿಗೆ ಚಿತ್ರೀಕರಣಕ್ಕೆ ಅಣಿಯಾಗಿದ್ದಾರೆ, ಆ ಚಿತ್ರ ಬರುವ ತನಕ ತನ್ನ ಹುಟ್ಟ ಹಬ್ಬದ ಸಂಭ್ರಮ ಇಲ್ಲ ಎಂದು ಘೋಷಿಸಿದ್ದರು.ಆದರೆ ಅಭಿಮಾನಿಗಳ ಒತ್ತಡಕ್ಕೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಕನ್ನಡ ಚಿತ್ರರಂಗಕ್ಕೆ ರವಿ ಕಾಲಿರಿಸಿ 26ವರ್ಷಗಳು ಸಂದಿವೆ. ಈಗ ಅವರ ಅಭಿನಯದ ಕ್ರೇಜಿ ಲೋಕ ತೆರೆಗೆ ಬರಲು ಸಜ್ಜಾಗಿದೆ. ರಾಜ್ಯದಲ್ಲಿ ಹಾಲಿವುಡ್ ಮಾದರಿಯ ಸಿನಿಮಾ ನಿರ್ಮಾಣಕ್ಕೆ ಎಲ್ಲಾ ಸೌಲಭ್ಯಗಳಿರುವ ಅತ್ಯಾಧುನಿಕ ಸಿನಿ ನಗರವನ್ನು 350ಕೋಟಿ ವೆಚ್ಚದಲ್ಲಿ ನಿರ್ಮಿಸುವ ಮಹತ್ವಕಾಂಕ್ಷೆಯನ್ನು ಕನಸುಗಾರ ವ್ಯಕ್ತಪಡಿಸುತ್ತಾರೆ. ಅದಕ್ಕಾಗಿ ಸಿದ್ದತೆಗಳನ್ನು ಮಾಡಿಕೊಂಡಿದ್ದಾರೆ. ಈ ವರ್ಷದ ಅಂತ್ಯದ ವೇಳೆಗೆ ತಮ್ಮ ಪುತ್ರನನ್ನು ನಾಯಕನನ್ನಾಗಿಸಿ ಚಿತ್ರ ತಂದ ನಂತರ ರವಿಯ ಕನಸಿನ  ಕ್ರೇಜೀಸ್ಟಾರ್ ಸಿನಿಮಾ ಬರಲಿದೆ. ಈಗ ಕನ್ನಡ ಸಿನಿಮಾಗಳಲ್ಲಿ ಹೊಸತನ ಬಂದಿದೆ, ಹೊಸಬರ ಆಗಮನವಾಗಿದೆ ಅಭಿಮಾನಿಗಳು ಮೊದಲಿನಂತಿಲ್ಲ ಬದಲಾವಣೆ ಬಯಸುತ್ತಾರೆ ಈ ಎಲ್ಲಾ ವೈರುದ್ಯಗಳ ನಡುವೆ ಕನಸುಗಾರ ಮತ್ತೊಮ್ಮೆ ಎದ್ದು ಬರುವನೇ ಕಾದು ನೋಡೋಣ..

ಮಾಧ್ಯಮದ ಅಂಗಡಿಗಳು ಮತ್ತು ಪತ್ರಕರ್ತರು!

ಕಾಸ್ಟ್ ಕಟಿಂಗ್ ಮತ್ತು ನಿಶ್ಚಿತ ಆದಾಯದ ಕೊರತೆಯಿಂದ ಮಾಧ್ಯಮ ಸಂಸ್ಥೆಗಳು ಪತ್ರಕರ್ತರನ್ನು ಪರ್ಫಾರ್ಮೆನ್ಸ್ ವೀಕ್ ಎಂಬ ಕಾರಣ ನೀಡಿ ತೆಗೆಯುವ ಪ್ರಕ್ರಿಯೆ ಈಗ ನಡೆಯುತ್ತ...